Kharge ಹೇಳಿಕೆ ಮತ್ತೆ ವಿವಾದಕ್ಕೆ ಕಾರಣ.!

Kharge ಹೇಳಿಕೆ ಮತ್ತೆ ವಿವಾದಕ್ಕೆ ಕಾರಣ.!

ಬಿಜೆಪಿ–ಆರ್‌ಎಸ್‌ಎಸ್ ಬಗ್ಗೆ ಟೀಕೆ, ರಾಜಕೀಯ ಕಿಡಿ.

ಬೆಂಗಳೂರು:  ಮಲ್ಲಿಕಾರ್ಜುನ ಖರ್ಗೆ ಅವರ ಇತ್ತೀಚಿನ ಹೇಳಿಕೆ ಮತ್ತೆ ಭಾರೀ ವಿವಾದಕ್ಕೆ ಕಾರಣವಾಗಿದೆ.ಅಸ್ಸಾಂನ ಸಭೆಯಲ್ಲಿ ಬಿಜೆಪಿ ಹಾಗೂ ಆರ್‌ಎಸ್‌ಎಸ್ ಬಗ್ಗೆ ನೀಡಿದ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.ಅಷ್ಟಕ್ಕೂ ಮಲ್ಲಿಕಾರ್ಜುನ ಖರ್ಗೆ ಈ ರೀತಿಯ ವಿವಾದಾತ್ಮಕ ಹೇಳಿಕೆಗಳನ್ನು ನೀಡಿರೋದು ಇದೇ ಮೊದಲೇನೂ ಅಲ್ಲ. ಈ ಹಿಂದೆಯೂ ಇವರು ನೀಡಿದ್ದ ಕೆಲ ಹೇಳಿಕೆಗಳು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.

‘ಗುಜರಾತಿಗರು ಅನಕ್ಷರಸ್ಥರು’

ವಿಧಾನಸಭೆ ಚುನಾವಣೆ ನಿಮಿತ್ತಕೇರಳದ ಇಡುಕ್ಕಿಯಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮೊನ್ನೆ ಮೊನ್ನೆಯಷ್ಟೇ ಮಾತನಾಡಿದ್ದ ಮಲ್ಲಿಕಾರ್ಜುನ ಖರ್ಗೆ, ಗುಜರಾತ್ ಜನರು ಅನಕ್ಷರಸ್ಥರು. ಹೀಗಾಗಿ ನರೇಂದ್ರ ಮೋದಿ ಅಲ್ಲಿನ ಜನರನ್ನು ಸುಲಭವಾಗಿ ದಾರಿ ತಪ್ಪಿಸಬಹುದು, ಆದರೆ ಕೇರಳದ ಜನರು ಹೆಚ್ಚು ಸಂವೇದನಾಶೀಲ ಮತ್ತು ವಿದ್ಯಾವಂತರು. ಹೀಗಾಗಿ ಅವರನ್ನು ಯಾರೂ ಮೋಸಗೊಳಿಸಲು ಸಾಧ್ಯವಿಲ್ಲ ಎಂದಿದ್ದರು. ಯಾವಾಗ ತಮ್ಮ ಹೇಳಿಕೆ ತೀವ್ರ ವಿವಾದವಾಗಿ ಟೀಕೆಗೆ ಗುರಿಯಾಯ್ತೋ ಎಚ್ಚೆತ್ತ ಖರ್ಗೆ ತಮ್ಮ ಮಾತಿಗೆ ವಿಷಾದವನ್ನೂ ವ್ಯಕ್ತಪಡಿಸಿದ್ದರು. ಇತ್ತೀಚೆಗೆ ಕೇರಳದಲ್ಲಿ ನಡೆದ ಚುನಾವಣಾ ಭಾಷಣದಲ್ಲಿ ನನ್ನ ಕೆಲವು ಹೇಳಿಕೆಗಳನ್ನು ಉದ್ದೇಶಪೂರ್ವಕವಾಗಿ ತಪ್ಪಾಗಿ ಅರ್ಥೈಸಲಾಗುತ್ತಿದೆ.

‘ಮೋದಿ ವಿಷ ಸರ್ಪ ಇದ್ದಂತೆ’

2023ರ ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆಯೂ ಖರ್ಗೆ ಭಾರಿ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದರು. ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್‌ ಪಟ್ಟಣದಲ್ಲಿ ಆಯೋಜಿಸಿದ್ದ ಕಾಂಗ್ರೆಸ್‌ ಪ್ರಚಾರ ಸಭೆಯಲ್ಲಿ ಮಾತನಾಡಿದ್ದ ಅವರು, ಪ್ರಧಾನಿ ನರೇಂದ್ರ ಮೋದಿ ವಿಷ ಸರ್ಪ ಇದ್ದಂತೆ, ವಿಷದ ಹಾವನ್ನು ನೆಕ್ಕಿದ್ರೆ ಸತ್ತು ಹೋಗ್ತಾರೆ. ದೇಶಕ್ಕೆ ಬಿಜೆಪಿಯವರ ಕೊಡುಗೆ ಏನು ಅಂತಾ ಹೇಳಲಿ, ನಿಮ್ಮ ಮನೆಯಲ್ಲಿ ದೇಶಕ್ಕಾಗಿ ಒಂದೂ ನಾಯಿ ಕೂಡ ಸತ್ತಿಲ್ಲ ಎಂದಿದ್ದರು. ಇದಕ್ಕೆ ಕೌಂಟರ್​​ ನೀಡಿದ್ದ ಮೋದಿ, ನಾನು ಶಿವನ ಕೊರಳಿನ ಸರ್ಪವಾಗಲು ಇಷ್ಟಪಡುತ್ತೇನೆ ಎಂದಿದ್ದು ಕೂಡ ಭಾರಿ ಸುದ್ದಿಯಾಗಿತ್ತು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *