ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಡಿಕ್ಕಿ – ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವು

ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಡಿಕ್ಕಿ - ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವು

ಬ್ಯಾಲ್ಯ :  ಪುರವರ ಹೋಬಳಿ ಕೋಡಗದಾಲ ಗ್ರಾಮದ ಬಳಿ  ವಾಯುವ್ಯ ಕರ್ನಾಟಕ ಸಾರಿಗೆ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಡಿಕ್ಕಿ ಸಂಭವಿಸಿ ದ್ವಿಚಕ್ರ ವಾಹನ ಸವಾರ  ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ  ನಡೆದಿದೆ.

ತಾಲೂಕಿನ ನಿಟ್ರಹಳ್ಳಿ ನಿವಾಸಿ ಲೋಕೇಶ್ (೪೫) ಮೃತ ದುರ್ಧೈವಿ ಯಾಗಿದ್ದು, ಚಿಂತಾಮಣಿ ಯಿಂದ ಹಾವೇರಿಗೆ ತೆರಳುತ್ತಿದ್ದ ವಾಯುವ್ಯ ಕರ್ನಾಟಕ ಸಾರಿಗೆ (ಹಾನಗಲ್ ಬಸ್ )ಹಾಗೂ ದ್ವಿಚಕ್ರ ವಾಹನದ ನಡುವೆ ಅವಘಡ ಸಂಭವಿಸಿದೆ. ಬಸ್ ಹಾಗೂ ದ್ವಿ ಚಕ್ರವಾಹನದ ನಡುವೆ ಡಿಕ್ಕಿ ಸಂಭವಿಸಿದ ನಂತರ ಬಸ್ ಬಲಗಡೆ ರಸ್ತೆ ಬದಿಯ ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಅದೃಷ್ಟವಷಾತ್ ಬಸ್ ಪ್ರಯಾಣಿಕರು ಯಾವುದೇ ಪ್ರಾಣಪಾಯವಿಲ್ಲದೆ ಪಾರಾಗಿದ್ದಾರೆ.

ಸ್ಥಳಕ್ಕೆ ಮಧುಗಿರಿ ಪೊಲೀಸ್ ಠಾಣೆ ವೃತ್ತ ನಿರೀಕ್ಷಕ ಹನುಮಂತರಾಯಪ್ಪ, ಕೊಡಿಗೇನಹಳ್ಳಿ ಪೊಲೀಸ್ ಠಾಣಾ ಪಿಎಸ್ಐ ಶ್ರೀನಿವಾಸ್ ಭೇಟಿ ನೀಡಿ ಪರಿಶೀಲನೆ ನಡೆಸಿ ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *