ಹಿಂದುಳಿದ ದಲಿತ The Union of Patriarchs ಸ್ವಾಮೀಜಿಗಳ ನಿಯೋಗ ಬೇಡಿಕೆಗಳನ್ನು ಮುಂದಿಟ್ಟು ಚರ್ಚಿಸಿದರು.

ಹಿಂದುಳಿದ ದಲಿತ The Union of Patriarchs ಸ್ವಾಮೀಜಿಗಳ ನಿಯೋಗ ಬೇಡಿಕೆಗಳನ್ನು ಮುಂದಿಟ್ಟು ಚರ್ಚಿಸಿದರು.

ಬೆಂಗಳೂರು; ಹಿಂದುಳಿದ ದಲಿತ ಮಠಾಧೀಶರ ಒಕ್ಕೂಟದ ಸ್ವಾಮೀಜಿಗಳ ನಿಯೋಗ ಇಂದು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಬೇಡಿಕೆಗಳನ್ನು ಮುಂದಿಟ್ಟು ಚರ್ಚಿಸಿದರು.

ಸ್ವಾಮೀಜಿಗಳ ನಿಯೋಗದ ಬೇಡಿಕೆಯಂತೆ…

*ಎಲ್ಲಾ ದಲಿತ ಮತ್ತು ಹಿಂದುಳಿದ ಮಠಗಳಿಗೆ ಅನುದಾನ ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.

*ಹಿಂದುಳಿದ ಮತ್ತು ದಲಿತ ಅರ್ಚಕರನ್ನು ರೂಪಿಸಲು ಅನುಕೂಲ ಆಗುವ ರೀತಿ ಗುರುಕುಲ ಆರಂಭಿಸಲು ಚಿತ್ರದುರ್ಗ ಜಿಲ್ಲೆಯಲ್ಲಿ ಜಾಗ ನೀಡುವಂತೆ ನಿಯೋಗ ಮನವಿ ಮಾಡಿತು. ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಗ ಗುರುತಿಸಿ ವರದಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

*ಎಲ್ಲಾ ಹಿಂದುಳಿದ ಮತ್ತು ದಲಿತ ಮಠಗಳಿಗೆ ಬೆಂಗಳೂರಿನಲ್ಲಿ ನಿವೇಶನ ಒದಗಿಸುವಂತೆ ಮಾಡಿದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಈ ಬಗ್ಗೆ ಪರಿಶೀಲನೆ ಮಾಡುವ ಭರವಸೆ ನೀಡಿದರು.

Leave a Reply

Your email address will not be published. Required fields are marked *