ಜೇನುಹುಳು ದಾಳಿಗೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಸ್ನೇಹಿತ ಸಾವು..!

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಮತ್ತು ಕನಕಪುರದಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ಜೇನುಹುಳುಗಳ ದಾಳಿಗೆ ಇಬ್ಬರು ಸಾವನ್ನಪ್ಪಿದ್ದಾರೆ.

ರಾಮನಗರ ಜಿಲ್ಲೆಯ ಕನಕಪುರದ ಹಾರೋಹಳ್ಳಿ ಬಳಿಯ ಬೆಳಗುಲಿ ಗ್ರಾಮದಲ್ಲಿ ನಡೆದ ಘಟನೆಯಲ್ಲಿ ರಮೇಶ್ ಡಿ (21) ಎಂಬಾತ ಜೇನುಹುಳು ಕಚ್ಚಿ ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ. ರಮೇಶ್ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹಿತ್ತಲಹಳ್ಳಿ ಗ್ರಾಮದವರು.

ಗಾಯಾಳುಗಳಲ್ಲಿ ಒಬ್ಬರಾದ ದರ್ಶನ್ ಅವರ ಹುಟ್ಟುಹಬ್ಬವನ್ನು ಸ್ನೇಹಿತರ ಗುಂಪು ಆಚರಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಪಶ್ಚಿಮ ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿರುವ ಆರು ಮಂದಿ ದರ್ಶನ್ ಹುಟ್ಟುಹಬ್ಬ ಆಚರಿಸಲು ಬೆಳಗುಲಿಗೆ ತೆರಳಿದ್ದರು ಎಂದು ಕನಕಪುರ ಗ್ರಾಮಾಂತರ ಪೊಲೀಸರು ತಿಳಿಸಿದ್ದಾರೆ.

ದರ್ಶನ್, ಕಿರಣ್, ಮಲ್ಲಿಕಾರ್ಜುನ್, ಮೋಹನ್ ಮತ್ತು ಗಿರೀಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಣಿವೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಗುಂಪು ಪಕ್ಕದ ಸ್ಥಳದಲ್ಲಿ ಊಟ ಮಾಡುತ್ತಿತ್ತು. ಅಡುಗೆ ಸ್ಥಳದಿಂದ ಹೊಗೆಯು ಹತ್ತಿರದ ಪೊದೆಯಲ್ಲಿದ್ದ ಜೇನುಹುಳು ತೊಂದರೆಗೊಳಿಸಿರಬಹುದು ಎನ್ನಲಾಗಿದೆ.

ದಾಳಿಯನ್ನು ಗಮನಿಸಿದ ಗ್ರಾಮಸ್ಥರು ಯುವಕರನ್ನು ರಕ್ಷಿಸಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ರಮೇಶ್ ಸಂಜೆ 4:30ಕ್ಕೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ. ದರ್ಶನ್, ಕಿರಣ್ ಮತ್ತು ರಮೇಶ್ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಎರಡನೇ ಘಟನೆ

ಮತ್ತೊಂದು ಘಟನೆಯಲ್ಲಿ ಗುರುವಾರ ಮಧ್ಯಾಹ್ನ ದೊಡ್ಡಬಳ್ಳಾಪುರ ಸಮೀಪದ ಚನ್ನದೇವಿ ಅಗ್ರಹಾರ ಗ್ರಾಮದಲ್ಲಿ ಜೇನುನೊಣಗಳು ಕಚ್ಚಿ 65 ವರ್ಷದ ರೈತ ಮೃತಪಟ್ಟಿದ್ದಾರೆ. ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರಂಗನಾಥ್ ಅವರ ಮೇಲೆ ಜೇನುನೊಣಗಳು ದಾಳಿ ನಡೆಸಿವೆ.

50ಕ್ಕೂ ಹೆಚ್ಚು ಜೇನುನೊಣಗಳಿಂದ ಕುಟುಕಿದ್ದ ರಂಗನಾಥ್ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗ್ರಾಮಸ್ಥರು ಆತನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ದೊಡ್ಡಬೆಳವಂಗಲ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Pragati TV Social Connect for more latest u

Leave a Reply

Your email address will not be published. Required fields are marked *