ಬೆಳಗಾವಿಯಲ್ಲಿ ಪ್ರೇಮ ಪ್ರಕರಣಕ್ಕೆ ತೀವ್ರ ತಿರುವು: ಯುವಕನ ಮೇಲೆ ಗುಂಡಿನ ದಾಳಿ

ಬೆಳಗಾವಿ: ಬೆಳಗಾವಿಯ ಮಹಾಂತೇಶ ನಗರದಲ್ಲಿರುವ ಕೆಎಂಎಫ್ ಡೈರಿ ಬಳಿ ಬುಧವಾರ ಸಂಜೆ ಗುಂಡಿನ ದಾಳಿ ನಡೆದಿದ್ದು, ಯುವಕನಿಗೆ ಗಂಭೀರ ಗಾಯವಾಗಿದೆ. ಟಿಳಕವಾಡಿಯ ದ್ವಾರಕಾ ನಗರ ಐದನೇ ಕ್ರಾಸ್‌ನ ನಿವಾಸಿ ಪ್ರಣೀತ್ ಕುಮಾರ್ (31) ಗಾಯಾಳು.

ಯುವಕನ ತೊಡೆ, ಗಲ್ಲಕ್ಕೆ ಗುಂಡು ತಗುಲಿದೆ. ಬಿಮ್ಸ್ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದೇಹಕ್ಕೆ ತಾಗಿದ ಗುಂಡುಗಳನ್ನು ಜೇಬಿನಲ್ಲಿಟ್ಟುಕೊಂಡೇ ಗಾಯಾಳು ಆಸ್ಪತ್ರೆಗೆ ಬಂದಿದ್ದಾನೆ ಎಂದು ತಿಳಿದು ಬಂದಿದೆ.

ಗುಂಡು ಹಾರಿಸಿದ ಆರೋಪಿಗಳು ಪರಾರಿಯಾಗಿದ್ದಾರೆ. ವೈಯಕ್ತಿಕ ದ್ವೇಷದಿಂದ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಮಾಳಮಾರುತಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆಸ್ಪತ್ರೆಗೆ ಭೇಟಿ ನೀಡಿದ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಗಾಯಾಳು ಜೊತೆ ಮಾತನಾಡಿ ಮಾಹಿತಿ ಸಂಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *