ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿ ಹತ್ಯೆಗೈದ ನೆರೆ ಮನೆಯ ವ್ಯಕ್ತಿ

ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿ ಹತ್ಯೆಗೈದ ನೆರೆ ಮನೆಯ ವ್ಯಕ್ತಿ

ಕುಶಾಲನಗರ : ಕುಶಾಲನಗರ ಹೊರವಲಯದ ಬಸವೇಶ್ವರ ಲೇಔಟ್ನಲ್ಲಿ ಅಮಾನುಷವಾದ ಹಲ್ಲೆಗೆ ಜೋಸೆಫ್ (58) ಎಂಬ ವ್ಯಕ್ತಿ ಸಾವನ್ನಪ್ಪಿದ್ದು, ಆತನ ಸ್ನೇಹಿತ ವಸಂತ್ (36) ಚಿಂತಾಜನಕ ಸ್ಥಿತಿಯಲ್ಲಿದ್ದಾರೆ. ಇದೀಗ ವಸಂತ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜೋಸೆಫ್ ಅವರ ನೆರೆಮನೆಯ ಗಿರೀಶ್ (29) ಆರೋಪಿಯಾಗಿದ್ದು ಆತನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಮದ್ಯದ ಅಮಲಿನಲ್ಲಿದ್ದ ಮೂವರು ವ್ಯಕ್ತಿಗಳು ಘಟನೆಗೂ ಮುನ್ನ ಮಾತಿನ ಚಕಮಕಿ ನಡೆಸಿದ್ದರು ಎನ್ನಲಾಗಿದೆ.

ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಗಿರೀಶ್ ಅವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ ಜೋಸೆಫ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ವಸಂತ್ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *