ಅರುಣಾಚಲ ಪ್ರದೇಶದಲ್ಲಿ ಭೀಕರ ದುರಂತ.

ಅರುಣಾಚಲ ಪ್ರದೇಶದಲ್ಲಿ ಭೀಕರ ದುರಂತ.

ಕಂದಕಕ್ಕೆ ಉರುಳಿದ ಟ್ರಕ್– 22 ದಿನಗೂಲಿ ಕಾರ್ಮಿಕರ ದುರ್ಮರಣ.

ಅರುಣಾಚಲ ಪ್ರದೇಶ: ಅಸ್ಸಾಂನ ಟಿನ್ಸುಕಿಯಾ ಜಿಲ್ಲೆಯಿಂದ ದಿನಗೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ ಇಂದು (ಗುರುವಾರ) ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯ ಕಂದಕಕ್ಕೆ ಉರುಳಿ ಕನಿಷ್ಠ 22 ಜನರು ಸಾವನ್ನಪ್ಪಿದ್ದಾರೆ. ಟ್ರಕ್ ಬೆಟ್ಟದ ರಸ್ತೆಯಿಂದ ಜಾರಿ ಸುಮಾರು 1,000 ಅಡಿಗಳಷ್ಟು ಕಡಿದಾದ ಕಮರಿಗೆ ಬಿದ್ದಿದ್ದರಿಂದ ಈ ದುರಂತ ಸಂಭವಿಸಿದೆ. ಟಿನ್ಸುಕಿಯಾದ ಗೆಲಾಪುಖುರಿ ಟೀ ಎಸ್ಟೇಟ್‌ನ ಕಾರ್ಮಿಕರು ಕೆಲಸಕ್ಕಾಗಿ ಹಯುಲಿಯಾಂಗ್‌ಗೆ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ನಡೆದಿದೆ. ಇನ್ನೂ ಎಲ್ಲ ಮೃತದೇಹಗಳನ್ನು ಹೊರತೆಗೆದಿಲ್ಲ. ಆದರೆ ಅವರೆಲ್ಲರೂ ಮೃತರಾಗಿದ್ದಾರೆ ಎನ್ನಲಾಗಿದೆ.

ಗುಡ್ಡಗಾಡು ಪ್ರದೇಶದ ಮೂಲಕ ಹೋಗುತ್ತಿದ್ದ ಟ್ರಕ್ ನಿಯಂತ್ರಣ ತಪ್ಪಿ ಆಳವಾದ ಕಂದಕಕ್ಕೆ ಬಿದ್ದಾಗ ಈ ಅಪಘಾತ ಸಂಭವಿಸಿದೆ. ರಕ್ಷಣಾ ತಂಡಗಳು ತಕ್ಷಣ ಸ್ಥಳಕ್ಕೆ ಧಾವಿಸಿದವು. ಸ್ಥಳೀಯ ಅಧಿಕಾರಿಗಳು ಮತ್ತು ವಿಪತ್ತು ನಿರ್ವಹಣಾ ತಂಡಗಳು ಆ ಟ್ರಕ್​​ನಲ್ಲಿದ್ದವರನ್ನು ಹುಡುಕಲು ಆ ಸ್ಥಳಕ್ಕೆ ತಲುಪಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *