ಶಾಲಾ ಕಾಲೇಜುಗಳಿಗೆ ಬೇಸಿಗೆ ರಜೆ ಇರುವ ಹಿನ್ನೆಲೆ ಈ ಅವಧಿಯಲ್ಲಿ ಬಹುತೇಕ ಜನರು ತಮ್ಮ ತಮ್ಮ ಕುಟುಂಬಸ್ಥರೊಂದಿಗೆ ಪ್ರವಾಸ ಹೋಗುವುದು ಸಹಜ. ಅಂತೆಯೇ ರಾಯಚೂರು ಜಿಲ್ಲೆಯಿಂದ ಮೈಸೂರು ಜಿಲ್ಲೆಯ ಪ್ರವಾಸ ಕೈಗೊಂಡಿದ್ದ 11 ಜನರಿಗೆ ಮಾರ್ಗಮಧ್ಯೆ ಜವರಾಯ ಅಡ್ಡಿಯಾಗಿದ್ದಾನೆ.
![](http://pragatitv.in/wp-content/uploads/2022/09/JEENI_ADD_WEB-1024x576.jpg)
ರಸ್ತೆಯಲ್ಲಿ ನಿಂತಿದ್ದ ಬಸ್ಗೆ ಟಿಟಿ ವಾಹನ ಡಿಕ್ಕಿಯಾದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗದ ಡಿ. ಹೊಸಹಳ್ಳಿ ಬಳಿ ನಡೆದಿದೆ. ಮೃತರನ್ನು ವೀರೇಶ್ (30) ಶಶಿಕಲಾ (79) ಎಂದು ಗುರುತಿಸಲಾಗಿದೆ. ಮೃತರು ರಾಯಚೂರು ಜಿಲ್ಲೆಯ ಸಿಂಧನೂರಿನವರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ದಿಲೀಪ್ ಕುಮಾರ್, ಆನಂದ್ ಕುಮಾರ್, ಪ್ರಿಯಾ, ಪ್ರತೀಕ್ಷಾ ಎಂಬುವರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಿಂಧನೂರಿನಿಂದ ಮೈಸೂರಿಗೆ ಶಶಿಕಲಾ ಕುಟುಂಬಸ್ಥರು ಪ್ರವಾಸಕ್ಕೆ ಹೊರಟಿದ್ದರು. ಮಾರ್ಗ ಮಧ್ಯೆ ಡಿ. ಹೊಸಹಳ್ಳಿ ಬಳಿ ನಿಂತಿದ್ದ ಖಾಸಗಿ ಬಸ್ಗೆ ಟಿಟಿ ಡಿಕ್ಕಿ ಹೊಡೆದಿದೆ. ಟಿಟಿ ವಾಹನದಲ್ಲಿ ಒಟ್ಟು 11 ಮಂದಿ ಪ್ರಯಾಣಿಸುತ್ತಿದ್ದರು. ಈ ಸಂಬಂಧ ಹುಲಿಯೂರು ದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Pragati TV Social Connect for more latest u