ತುಮಕೂರು: ನಿಶ್ಚಿತಾರ್ಥದ ಉಂಗುರವೊoದು ಕಳೆದು ಹೋಗಿದ್ದಕ್ಕೆ ಯುವಕನೊಬ್ಬ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ದೇವರಾಯಪಟ್ಟಣದಲ್ಲಿ ನಡೆದಿದೆ. ಮೃತ ಯುವಕನನ್ನು ಕಮಲೇಶ್ (36) ಎಂದು ಗುರುತಿಸಲಾಗಿದ್ದು, ಈತ ನ.17 ರಂದು ವಿಷ ಸೇವಿಸಿದ್ದು, ಈತನನ್ನು ಆಸ್ಪತ್ರೆಗೆ ಸೇರಿಸಲಾಗಿ ಅಲ್ಲಿ ಚಿಕಿತ್ಸೆ ಫಲಿಸದೆ ಸದರಿ ಯುವಕ ಸಾವನ್ನಪ್ಪಿದ್ದಾನೆ.
ಈತನ ವಿವಾಹವು ನ.22ರಂದು ನಡಸೆಯಬೇಕಿತ್ತು. ಮೂರು ತಿಂಗಳ ಹಿಂದೆಯಷ್ಟೇ ಈತನ ವಿವಾಹ ನಿಶ್ಚಯವಾಗಿತ್ತು. ನಿಶ್ಚಿಥಾರ್ಥದ ಸಮಯದಲ್ಲಿ ನೀಡಿದ್ದ ಉಂಗುರವನ್ನು ಈತ ಕಳೆದುಕೊಂಡಿದ್ದಕ್ಕೆ ಹೆದರಿ ವಿಷ ಸೇವಿಸಿದ್ದ. ಈ ಬಗ್ಗೆ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Pragati TV Social Connect for more latest u