ಮದುವೆಗೂ ಮುನ್ನ ಮಸಣ ಸೇರಿದ ಯುವತಿ.

ಮದುವೆಗೂ ಮುನ್ನ ಮಸಣ ಸೇರಿದ ಯುವತಿ.

ಗೊರ್ಲತ್ತು ಕ್ರಾಸ್ ಬಳಿ ಸ್ಲೀಪರ್ ಬಸ್–ಲಾರಿ ಭೀಕರ ಅಪ*ತ.

ಚಿತ್ರದುರ್ಗ : ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಖಾಸಗಿ ಸ್ಲೀಪರ್​​ ಬಸ್​​ ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಟ್ಟು 6 ಜನ ಸಜೀವ ದಹನವಾಗಿದ್ದಾರೆ. ಲಾರಿ ಚಾಲಕ ಸೇರಿ ಬಸ್​​ನಲ್ಲಿದ್ದ 5 ಮಂದಿ ಪ್ರಾಣ ಕಳೆದುಕೊಂಡಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ಬಸ್​​​ನಲ್ಲಿ ಚಾಲಕ ಮತ್ತು ನಿರ್ವಾಹಕ ಸೇರಿ ಒಟ್ಟು 33 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಚಿತ್ರದುರ್ಗ, ಶಿರಾ, ಹಿರಿಯೂರು ಸೇರಿ ವಿವಿಧ ಆಸ್ಪತ್ರೆಗಳಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ತಾಯಿ ಮಗು ದಾರುಣ ಸಾವು

ಇನ್ನು ಅಪಘಾತದಲ್ಲಿ ಬದುಕುಳಿದ ಒಬ್ಬೊಬ್ಬ ಪ್ರಯಾಣಿಕರ ಕತೆಯೂ ರೋಚಕವಾಗಿದೆ. ಒಂದೇ ಐಟಿ ಕಂಪನಿಯ 6 ಮಂದಿ ಸಹೋದ್ಯೋಗಿಗಳು ಬೆಂಕಿಯ ಕೆನ್ನಾಲೆಯ ನಡುವೆ ಸಿಲುಕಿ ಒದ್ದಾಡಿದ್ದಾರೆ. ಕವಿತಾರ ಮದುವೆ ನಿಗದಿಯಾಗಿರುವ ಹಿನ್ನೆಲೆ ಬ್ಯಾಚುಲರ್​​ ಪಾರ್ಟಿಗೆಂದು ಇವರು ಗೋಕರ್ಣಕ್ಕೆ ತೆರಳುತ್ತಿದ್ದರು. ಅಲ್ಲಿನ ಖಾಸಗಿ ರೆಸಾರ್ಟ್​​ನಲ್ಲಿ ಪಾರ್ಟಿಯೂ ನಿಗದಿಯಾಗಿತ್ತು. ಕ್ರಿಸ್ಮಸ್​ ರಜೆ ಹಿನ್ನೆಲೆ ತಂಡವೇ ಗೋಕರ್ಣಕ್ಕೆ ಹೊರಟಿತ್ತು. ಆ ಪೈಕಿ ಬಿಂದು ಮತ್ತು ಆಕೆಯ 5 ವರ್ಷದ ಮಗು ಗ್ರೇಯ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಗಾಯಾಳುಗಳಾದ ಶಶಾಂಕ್​​ ಮತ್ತು ಸಂಧ್ಯಾ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.

ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕ

ಹಾಸನ ಜಿಲ್ಲೆ ಚನ್ನರಾಯಪಟ್ಟಣ ಮೂಲದ ಮಾನಸ ಐಡಿಯಲ್ಲಿ ನಾಲ್ಕು ಜನರಿಗೆ ಟಿಕೆಟ್​​ ಬುಕ್​​ ಆಗಿತ್ತು. ಬೆಂಗಳೂರು ಐಟಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಮಾನಸ ಪಿಜಿಯಲ್ಲಿ ವಾಸವಿದ್ದರು. ತಮ್ಮ ಜೊತೆಗೆ ಇದ್ದ ನವ್ಯಾ, ಮಿಲನ ಸೇರಿ ಅಭಿಷೇಕ್​​ ಎಂಬವರ ಜೊತೆ ಗೋಕರ್ಣ ಪ್ರವಾಸಕ್ಕೆ ಹೊರಟಿದ್ದರು. ಮಾನಸಾಗೆ ಮದುವೆಯೂ ನಿಗದಿಯಾಗಿದ್ದು, ಅದಕ್ಕಾಗಿ ಆಭರಣವನ್ನೂ ಕುಟುಂಬ ಖರೀದಿಸಿತ್ತು. ಆದ್ರೆ ವಿಧಿಯಾಟಕ್ಕೆ ಹಸೆಮಣೆ ಏರುವ ಮುನ್ನವೇ ಅವರು ಮಸಣ ಸೇರಿದ್ದಾರೆ. ರಶ್ಮಿ ಮತ್ತು ನವ್ಯಾ ಎಂಬವರು ಕೂಡ ಘಟನೆಯಲ್ಲಿ ಮೃತಪಟ್ಟಿರೋದು ದೃಢಪಟ್ಟಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *