ನಟ ದರ್ಶನ್ ಬಂಧನ: ರೇಣುಕಾಸ್ವಾಮಿ ಹ* ಕೇಸಲ್ಲಿ ಮತ್ತೆ ಜೈಲು ವಾಸ.

ನಟ ದರ್ಶನ್ ಬಂಧನ: ರೇಣುಕಾಸ್ವಾಮಿ ಹ* ಕೇಸಲ್ಲಿ ಮತ್ತೆ ಜೈಲು ವಾಸ.

ಬೆಂಗಳೂರು : ನಟ ದರ್ಶನ್ ತೂಗುದೀಪ ಅವರಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದೆ. ಇದರಿಂದ ಅವರಿಗೆ ಮತ್ತೆ ಸಂಕಷ್ಟು ಎದುರಾಗಿದೆ. ಕೋರ್ಟ್ ಆದೇಶದ ಬೆನ್ನಲ್ಲೇ ದರ್ಶನ್ ಅವರನ್ನು ಬಂಧಿಸಲಾಗಿದೆ. ಇಷ್ಟು ದಿನ ಪ್ರವಾಸ, ಶೂಟಿಂಗ್ ಎಂದು ಸುತ್ತಾಡುತ್ತಿದ್ದ ಡಿ ಬಾಸ್ ಇನ್ಮುಂದೆ ಜೈಲಿನಲ್ಲಿ ಕಾಲ ಕಳೆಯಬೇಕಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ 7 ಪ್ರಮುಖ ಆರೋಪಿಗಳ ಜಾಮೀನು ರದ್ದು ಮಾಡಲಾಗಿದೆ. ದರ್ಶನ್ ಪವಿತ್ರಾ ಗೌಡ, ಲಕ್ಷಣ್, ಪ್ರದೋಷ್ ಮುಂತಾದವರು ಮತ್ತೆ ಈಗ ಜೈಲು ಸೇರಬೇಕಾಗಿದೆ. ಸುಪ್ರೀಂ ಕೋರ್ಟ್ನಲ್ಲಿ ಜಾಮೀನು  ರದ್ದಾದ ಬೆನ್ನಲ್ಲೇ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪವಿತ್ರಾ ಗೌಡ ಅವರನ್ನು ಕೂಡ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇಷ್ಟು ದಿನಗಳ ಕಾಲ ಸಿನಿಮಾ ಕೆಲಸ ಹಾಗೂ ಫ್ಯಾಮಿಲಿ ಜೊತೆಯಲ್ಲಿ ಬ್ಯುಸಿ ಆಗಿದ್ದ ದರ್ಶನ್ ಅವರಿಗೆ ಇನ್ಮುಂದೆ ಜೈಲೇ ಗತಿಯಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *