ತ್ರಿಶ್ಶೂರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಆಫ್ರಿಕನ್ ಹಂದಿಜ್ವರ ಪತ್ತೆ

ತಿರುವನಂತಪುರ: ಕೇರಳದ ತ್ರಿಶ್ಶೂರ್ ಜಿಲ್ಲೆಯ ಹಳ್ಳಿಯೊಂದರ ಜಮೀನಿನಲ್ಲಿ ಆಫ್ರಿಕನ್ ಹಂದಿಜ್ವರ ಪತ್ತೆಯಾಗಿದೆ.

ಸೋಂಕಿತ ಹಂದಿಯಿಂದ ನೇರ ಸಂಪರ್ಕದ ಮೂಲಕ ಹಂದಿ ಜ್ವರವು ಒಂದು ಹಂದಿಯಿಂದ ಮತ್ತೊಂದು ಹಂದಿಗೆ ಸುಲಭವಾಗಿ ಹರಡುವ ಕಾರಣ, ತ್ರಿಶೂರ್ ಜಿಲ್ಲೆಯ ಮಡಕ್ಕತಾರಾ ಪಂಚಾಯತ್‌ನ ಖಾಸಗಿ ಜಮೀನಿನಲ್ಲಿ 310 ಹಂದಿಗಳನ್ನು ಕೊಲ್ಲಲು ತ್ರಿಶೂರ್ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ

14ನೇ ವಾರ್ಡ್‌ನ ವೆಲಿಯಂತರ ಕುಟ್ಟಲಪುಳಬಾಬು ಎಂಬುವವರ ಮಾಲೀಕತ್ವದ ಹಂದಿಗಳಲ್ಲಿ ರೋಗ ದೃಢಪಟ್ಟಿದ್ದು, ಹಂದಿಗಳನ್ನು ಕೊಂದು ಹೂಳಲು ಜಿಲ್ಲಾಧಿಕಾರಿಗಳು ಜಿಲ್ಲಾ ಪಶುಸಂಗೋಪನಾ ಅಧಿಕಾರಿಗೆ ಸೂಚಿಸಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ವೈದ್ಯರು, ಜಾನುವಾರು ನಿರೀಕ್ಷಕರು ಮತ್ತು ಪರಿಚಾರಕರನ್ನು ಒಳಗೊಂಡ ತಂಡವು ಕೊಲ್ಲುವ ಪ್ರಕ್ರಿಯೆಗೆ ಮುಂದಾಗಿದೆ. ಮುಂದಿನ ಪ್ರಾಥಮಿಕ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಅದು ಹೇಳಿದೆ. ಹಾನಿಗೊಳಗಾದ ಜಮೀನಿನ ಒಂದು ಕಿಲೋಮೀಟರ್ ವ್ಯಾಪ್ತಿಯ ಪ್ರದೇಶವನ್ನು ರೋಗ ಪೀಡಿತ ಪ್ರದೇಶವೆಂದು ಘೋಷಿಸಲಾಗಿದೆ ಮತ್ತು 10 ಕಿಮೀ ವ್ಯಾಪ್ತಿಯ ಪ್ರದೇಶವನ್ನು ಕಣ್ಗಾವಲು ಪ್ರದೇಶವೆಂದು ಘೋಷಿಸಲಾಗಿದೆ

Leave a Reply

Your email address will not be published. Required fields are marked *