ಹಾಸನ: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಮೃತ ಪಟ್ಟಿರುವವರು ಹೆಚ್ಚು. ಇನ್ನು ಹಾಸನದಲ್ಲಿ ಹೃದಯಘಾತದಿಂದ 11 ವರ್ಷದ ಬಾಲಕ ಮೃತಪಟ್ಟ ಘಟನೆ ಆಲೂರು ತಾಲೂಕಿನ ಚೆನ್ನಾಪುರ ಗ್ರಾಮದಲ್ಲಿ ನಡೆದಿದೆ. ಸರ್ಕಾರಿ ಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿದ್ದ ಸಚಿನ್ಗೆ ನೆನ್ನೆ ಇದ್ದಕ್ಕಿದ್ದಂತೆ ಎದೆ ನೋವು ಕಾಣಿಸಿಕೊಂಡಿದ್ದು ಎದೆ ನೋವಿನಿಂದ ಶಾಲೆಗೆ ಹೋಗದೆ ಮನೆಯಲ್ಲಿ ಇದ್ದ ಮನೆಯಲ್ಲಿರುವಾಗ ಏಕಾಏಕಿ ಹೃದಯಾಘಾತದಿಂದ ಕೊನೆ ಉಸಿರೆಳೆದಿದ್ದಾನೆ. ಮಲಗಿದ್ದ ಮಗನನ್ನು ಮಾತನಾಡಿಸಲು ಪೋಷಕರು ಮುಂದಾದಾಗ ಮಗ ಮಾತನಾಡಲಿಲ್ಲ ಎಚ್ಚರವೂ ಆಗಿಲ್ಲ ಇದರಿಂದ ಗಾಬರಿಗೊಂಡ ಪೋಷಕರು ತಕ್ಷಣವೇ ಆಲೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಪರೀಕ್ಷೆ ನಡೆಸಿದ ವೈದ್ಯರು ಬಾಲಕ ಮೃತ ಪಟ್ಟಿರುವುದನ್ನು ದೃಢಪಡಿಸಿದ್ದಾರೆ.
11 ವರ್ಷದ ಬಾಲಕನಿಗೆ ಹೃದಯಘಾತ.
