ಆನೇಕಲ್‌ ಬರ್ಥ್‌ಡೇ ಪಾರ್ಟಿ ಕೊ*ಲೆಯಲ್ಲಿ ಅಂತ್ಯ!

ಆನೇಕಲ್‌ ಬರ್ಥ್‌ಡೇ ಪಾರ್ಟಿ ಕೊ*ಲೆಯಲ್ಲಿ ಅಂತ್ಯ!

ಆನೇಕಲ್: ಬರ್ತ್​​ಡೇ ಪಾರ್ಟಿ ಬಿಲ್​​ ಕೊಡುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಸ್ನೇಹಿತರಿಂದಲೇ ಬರ್ತ್​​ಡೇ ಬಾಯ್ ಕೊಲೆಯಾದ  ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹಾರಗದ್ದೆ ವಡ್ಡರಪಾಳ್ಯದಲ್ಲಿ ನಡೆದಿದೆ. ಸಂದೀಪ್(23) ಕೊಲೆಯಾದ ಯುವಕ. ಸ್ನೇಹಿತರಾದ ಸಂತೋಷ್ ಮತ್ತು ಸಾಗರ್​ ಬಂಧಿತರು. ಜಿಗಣಿ ಠಾಣೆ ಪೊಲೀಸರು ತನಿಖೆ ನಡೆಸಿದ್ದಾರೆ.

ನಡೆದದ್ದೇನು?

ಅಕ್ಟೋಬರ್ 16ರಂದು ಸಂದೀಪ್​ ಬರ್ತ್​ಡೇ ಇತ್ತು. ಪಾರ್ಟಿಗೆಂದು ಸ್ನೇಹಿತರನ್ನು ಬಾರ್​ಗೆ ಕರೆದುಕೊಂಡು ಹೋಗಿದ್ದರು. ಪಾರ್ಟಿ ಮುಗಿದ ಬಳಿಕ ಸಂದೀಪ್ ಬಿಲ್ ಕಟ್ಟಿದ್ದರು. ಆದರೆ 2ನೇ ಸಲ‌ ಬಿಲ್‌ ಕಟ್ಟುವಂತೆ ಸ್ನೇಹಿತರು ಸಂದೀಪ್​ಗೆ ಒತ್ತಾಯಿಸಿದ್ದಾರೆ. ಹಣ ಇಲ್ಲ ಎಂದಿದ್ದಕ್ಕೆ ಬಾರ್ ಬಳಿ ಸಂತೋಷ್ ಗಲಾಟೆ ಮಾಡಿದ್ದರು. ಇದರಿಂದ ಬೇಸರಗೊಂಡು ಸಂದೀಪ್ ವಾಪಸ್‌ ಊರಿಗೆ ಬಂದಿದ್ದರು.

ಅಷ್ಟಕ್ಕೆ ಸುಮ್ಮನಾಗದ ಸಂತೋಷ್ ಹಾಗೂ ಸಾಗರ್​​ ವಾಲಿಬಾಲ್ ಕೋರ್ಟ್ ಬಳಿ ಕರೆಸಿ ಸಂದೀಪ್​ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ ವೇಳೆ ಸಂದೀಪ್ ತಲೆಗೆ ಗಂಭೀರ ಗಾಯವಾಗಿದೆ. ಘಟನೆ ನಡೆದ 3 ದಿನದ ನಂತರ ಸಂದೀಪ್ ಬ್ರೈನ್​ನಲ್ಲಿ ಬ್ಲಡ್ ಕ್ಲಾಟ್ ಆಗಿದ್ದು, ಆನಂತರ ಪೋಷಕರು ಆತನನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಯಲ್ಲಿ ಕೆಲ ದಿನಗಳಿಂದ ಕೋಮಾದಲ್ಲಿ ಇದ್ದ ಸಂದೀಪ್, 2 ದಿನಗಳ ಹಿಂದೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *