ಪ್ರಜ್ವಲ್ ರೇವಣ್ಣ ಮಾದರಿಯ ಮತ್ತೊಂದು ಪ್ರಕರಣ ಉಡುಪಿಯಲ್ಲಿ ಬೆಳಕಿಗೆ

Hostelನಲ್ಲಿ ಅ*ಚಾರ ಪ್ರಕರಣ, Mudhol Lokapura ಯುವಕ Paramananda Jain ಬಂಧನ..

ಉಡುಪಿ: ಪ್ರಜ್ವಲ್ ರೇವಣ್ಣ ಮಾದರಿಯ ಮತ್ತೊಂದು ಪ್ರಕರಣ ಉಡುಪಿಯಲ್ಲಿ ಬೆಳಕಿಗೆ ಬಂದಿದೆ.

ಉದ್ಯಮಿಯಾಗಿರುವ ಶ್ರೇಯಸ್ ನಾಯ್ಕ (25) ಎಂಬ ಆರೋಪಿ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆಂಬ ಆರೋಪಗಳು ಕೇಳಿ ಬಂದಿವೆ.

ಉಡುಪಿಯ ಕುಂದಾಪುರ ತಾಲೂಕಿನ ಅಮಾವಾಸ್ಯೆಬೈಲು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು. ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದಾನೆಂದು ತಿಳಿದುಬಂದಿದೆ.

ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರನ್ನು ತನ್ನ ಭೋಗಕ್ಕೆ ಬಳಸುತ್ತಿದ್ದ ಆರೋಪಿ ಲೈಂಗಿಕ ದೌರ್ಜನ್ಯ ಎಸಗುವ ದೃಶ್ಯಗಳನ್ನು ಸೆರೆ ಹಿಡಿದು ತನ್ನ ಖಾಸಗಿ ಲ್ಯಾಪ್ಟಾಪ್​ನಲ್ಲಿ ಇರಿಸಿಕೊಳ್ಳುತ್ತಿದ್ದ. ಈತ ಶಾಲೆ, ಕಾಲೇಜು ವಿದ್ಯಾರ್ಥಿನಿಯರನ್ನೇ ಟಾರ್ಗೆಟ್ ಮಾಡುತ್ತಿದ್ದ. ಈತ ಬಾಲಕಿಯೊಬ್ಬಳ ಮೇಲೆ ಕಳೆದ ಒಂದು ವರ್ಷದಿಂದ ನಿರಂತರ ಅತ್ಯಾಚಾರ ಎಸಗಿದ್ದಾನೆನ್ನಲಾಗಿದೆ.

ಹಾಲಾಡಿ ರಸ್ತೆ ಹೆಗ್ಗೋಡ್ಲುವಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಾರಿನಲ್ಲಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ಅತ್ಯಾಚಾರದ ದೃಶ್ಯ ಸೆರೆ ಹಿಡಿದು ಬ್ಲ್ಯಾಕ್ ಮೇಲ್ ಮಾಡಿ ಪದೇ ಪದೇ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಗರ್ಭವತಿ ಆಗಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ

Leave a Reply

Your email address will not be published. Required fields are marked *