ಬೆಂಗಳೂರು ಬೃಹತ್ ಕಾರ್ಯಕ್ರಮಕ್ಕೆ ಎಐಸಿಸಿ ಕಾರ್ಯದರ್ಶಿಗಳಾದ ಪ್ರಿಯಾಂಕ ಗಾಂಧಿ ರವರು ಆಗಮನ….

ಇಂದು ತುಮಕೂರು ಜಿಲ್ಲಾ ಕಾಂಗ್ರೆಸ್ ವತಿಯಿಂದ ಎಚ್.ಎಂ.ಎಸ್ ಕಾಲೇಜಿನಲ್ಲಿ ನಡೆದ ನಾ ನಾಯಕಿ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಜನಪ್ರಿಯ ಶಾಸಕರಾದ ಡಾ.ಜಿ.ಪರಮೇಶ್ವರ್ ಜಿ ರವರು ಭಾಗವಹಿಸಿ ಜನವರಿ 16 ರಂದು ಬೆಂಗಳೂರಿನಲ್ಲಿ ನಡೆಯುವ ಬೃಹತ್ ಕಾರ್ಯಕ್ರಮಕ್ಕೆ ಎಐಸಿಸಿ ಕಾರ್ಯದರ್ಶಿಗಳಾದ ಪ್ರಿಯಾಂಕ ಗಾಂಧಿ ರವರು ಅಗಮಿಸಲಿದ್ದು ಈ ಕಾರ್ಯಕ್ರಮಕ್ಕೆ ಬೇಕಾದ ಅಗತ್ಯ ಪೂರ್ವ ತಯಾರಿಗಳ ಕುರಿತು ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ವಿ.ಪ ಸದಸ್ಯರಾದ ಆರ್.ರಾಜೇಂದ್ರ, ಮಾಜಿ ಶಾಸಕರಾದ ಷಡಕ್ಷರಿ, ರಫೀಕ್ ಅಹಮದ್,ಬೆಮೆಲ್ ಕಾಂತರಾಜು, ತುಮಕೂರು ಮಹಾನಗರ ಪಾಲಿಕೆ ಮೇಯರ್ ಪ್ರಭಾವತಿ ಸುಧೀಶ್ವರ್,  ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಚಂದ್ರಶೇಖರ್ ಗೌಡ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಗೀತಾ ರಾಜಣ್ಣ ಮುಖಂಡರಾದ ಹೆಚ್.ವಿ.ವೆಂಕಟೇಶ್, ಮರಿ ಚನ್ನಮ್ಮ, ಫರಾನ ಬೇಗಂ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Pragati TV Social Connect for more latest u

Leave a Reply

Your email address will not be published. Required fields are marked *