ಹರಿಪ್ರಸಾದ್–ಸುರೇಶ್ ಕುಮಾರ್ ನಡುವೆ ತೀವ್ರ ವಾಕ್ಸಮರ
ಬೆಂಗಳೂರು : ವಿವಾಹಿತ ಮಹಿಳೆಯೋರ್ವರ ಜೊತೆಗೆ ಜ್ಯೋತಿಷಿ ಕಮಲಾಕರ್ ಭಟ್ ಅಕ್ರಮ ಸಂಬಂಧ ಆರೋಪ ವಿಚಾರವಾಗಿ ನಡೆದ ಗಲಾಟೆಯಲ್ಲಿ ಓರ್ವ ಮೃತಪಟ್ಟಿರುವ ಘಟನೆಯೀಗ ಪರಿಷತ್ ಕಾಂಗ್ರೆಸ್ ಸದಸ್ಯ ಬಿ.ಕೆ. ಹರಿಪ್ರಸಾದ್ ಮತ್ತು ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಪ್ರಕರಣ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಹರಿಪ್ರಸಾದ್ ಬಿಜೆಪಿ ಮತ್ತು ತಮ್ಮ ಹೆಸರನ್ನು ಉಲ್ಲೇಖಿಸಿರುವ ಬಗ್ಗೆ ಸುರೇಶ್ ಕುಮಾರ್ ಗರಂ ಆಗಿದ್ದು, ಕಾಂಗ್ರೆಸ್ ನಾಯಕನ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.
ಕಾರವಾರದ ಸಿದ್ದಾಪುರದಲ್ಲಿ ಕಮಲಾಕರ್ ಭಟ್ ಹೆಸರಿನ ಜ್ಯೋತಿಷಿಯ ಅಕ್ರಮ ಸಂಬಂಧಕ್ಕೆ 41 ವರ್ಷದ ಅಮಾಯಕ ವಸಂತ್ ನಾಯ್ಕ್ ಬಲಿಯಾಗಿದ್ದಾರೆ. ಈ ಕ್ರಿಮಿನಲ್ ಪ್ರಕರಣ ನ್ಯಾಯಯುತ ತನಿಖೆಯಾಗಿ, ನ್ಯಾಯಾಲಯ ತೀರ್ಪು ಕೊಡುತ್ತದೆ. ಆದರೆ, ಇಂತಹ ಪ್ರಕರಣದಲ್ಲಿ ಸಂಘಪರಿವಾರದ ಹಿನ್ನಲೆಯಿಂದ ಬಂದ ಬಿಜೆಪಿಯ ಸುರೇಶ್ ಕುಮಾರ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರರಂತಹ ಜನಪ್ರತಿನಿಧಿಗಳ ಪಾತ್ರ ಏನು? ಎಂಬುದು ಸ್ವಸ್ಥ ಸಮಾಜ ದೃಷ್ಟಿಯಿಂದ ಮುಖ್ಯವಾಗುತ್ತದೆ. ಕಮಲಾಕರ ಭಟ್ ಎಂಬ ಜ್ಯೋತಿಷಿ ಭಾಗಿಯಾದ ಕೊಲೆ ಕೇಸ್ನಲ್ಲಿ ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ಪಾತ್ರವಿಲ್ಲವೇ? ಕೊಲೆ ಆರೋಪಿ ಜೋತಿಷಿ ಗುರೂಜಿ ಕಮಲಾಕರ ಭಟ್ಟನನ್ನು ಓರ್ವ ಶಾಸಕನಾಗಿ ಪ್ರೋತ್ಸಾಹಿಸಿ ಬೆಳೆಸಿದ್ದು ಸಂವಿಧಾನಕ್ಕೆ ಮಾಡುವ ಅಪಚಾರವಲ್ಲವೇ ? ಒರ್ವ ಮಾಜಿ ಕಾನೂನು ಸಚಿವನಿಗೆ ಇಷ್ಟೂ ಅರಿವಿಲ್ಲದಿರುವುದು ಈ ರಾಜ್ಯದ ದುರಂತವಾಗಿದೆ.
For More Updates Join our WhatsApp Group :




