ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನ  : ಆರೋಪಿ ಕಾಲಿಗೆ ಗುಂಡೇಟು

ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನ : ಆರೋಪಿ ಕಾಲಿಗೆ ಗುಂಡೇಟು

ಹುಬ್ಬಳ್ಳಿ : 17 ಕಳ್ಳತನ ಕೇಸ್ನಲ್ಲಿ ಭಾಗಿಯಾಗಿದ್ದ ಆರೋಪಿ ಕಾಲಿಗೆ ಹುಬ್ಬಳ್ಳಿಯ ಬೆಂಡಿಗೇರಿ ಠಾಣೆ ಪೊಲೀಸರಿಂದ ಗುಂಡಿನ ದಾಳಿ  ಮಾಡಲಾಗಿದೆ. ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ತಾರಿಹಾಳ ಬಳಿ ಆರೋಪಿ ವಿನೋದ್ ಕಾಲಿಗೆ ಗುಂಡೇಟು ನೀಡಲಾಗಿದೆ. ಕಳ್ಳತನ ಪ್ರಕರಣದಲ್ಲಿ ಸೋಮವಾರ ವಿನೋದ್ನನ್ನು ಪೊಲೀಸರು ಬಂಧಿಸಿದ್ದರು. ತನ್ನ ಸಹಚರರನ್ನು ತೋರಿಸುತ್ತೇನೆಂದು ಕರೆದೊಯ್ದಿದ್ದ ವಿನೋದ್, ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ.

ಬೆಂಡಿಗೇರಿ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಜಯಶ್ರೀ ಛಲವಾದಿ, ಕಾನ್ಸ್ಟೇಬಲ್ ರಮೇಶ್ ಹಿತ್ತಲಮನಿ ಮೇಲೆ ಹಲ್ಲೆಗೆ ಪ್ರಯತ್ನಿಸಿದ್ದ. ಆತ್ಮರಕ್ಷಣೆಗಾಗಿ ವಿನೋದ್ ಕಾಲಿಗೆ ಪಿಐ ಜಯಶ್ರೀ ಗುಂಡು ಹಾರಿಸಿದ್ದರು.

Leave a Reply

Your email address will not be published. Required fields are marked *