ಬೆಂಗಳೂರು || ಸಹದ್ಯೋಗಿಗೆ ಬಟ್ಟೆ ಸರಿಯಾಗಿ ಧರಿಸದಿದ್ರೆ ಆ್ಯಸಿಡ್ ಎರಚುವ ಬೆದರಿಕೆ, ಕೆಲಸದಿಂದ ವಜಾ

https://pragatitv.in/bangalore-threatened-to-throw-acid-on-co-worker-if-he-did-not-dress-properly-fired-from-work/

ಬೆಂಗಳೂರು: ಸರಿಯಾಗಿ ಬಟ್ಟೆ ಧರಿಸದಿದ್ದರೆ ಮಹಿಳಾ ಸಹೋದ್ಯೋಗಿಯ ಮುಖಕ್ಕೆ ಆ್ಯಸಿಡ್ ಎರಚುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯೊಬ್ಬನನ್ನು ಕಂಪನಿಯಿಂದ ವಜಾಗೊಳಿಸಲಾಗಿದೆ ಎಂದು ಶುಕ್ರವಾರ ಮೂಲಗಳು ತಿಳಿಸಿವೆ.ಪೊಲೀಸರು ಆರೋಪಿ ನಿಕಿತ್ ಶೆಟ್ಟಿ ವಿರುದ್ಧ ತನಿಖೆ ಆರಂಭಿಸಿದ್ದಾರೆ.

ವಿಶೇಷವಾಗಿ ಕರ್ನಾಟಕದಲ್ಲಿ, ನಿಮ್ಮ ಹೆಂಡತಿಗೆ ಒಳ್ಳೆಯ ಡ್ರೆಸ್ ಧರಿಸಲು ಹೇಳಿ, ಇಲ್ಲದಿದ್ದರೆ ಆಕೆಯ ಮುಖದ ಮೇಲೆ ಆಸಿಡ್ ಎರಚಬೇಕಾಗುತ್ತದೆ ಎಂದು ಶೆಟ್ಟಿ ಅವರು ಅಕ್ಟೋಬರ್ 9 ರಂದು ಅನ್ಸಾರ್‌ಗೆ ಮೇಸೆಜ್ ಕಳುಹಿಸಿದ್ದರು. ಕೂಡಲೇ ಅವರು ಪೊಲೀಸರಿಗೆ ಮಾಹಿತಿ ತಿಳಿಸಿದ್ದು, ಮೇಸೆಜ್ ಸ್ಕ್ರೀನ್ ಶಾಟ್ ನ್ನು ಹಂಚಿಕೊಂಡಿದ್ದರು.

ನನ್ನ ಹೆಂಡತಿಯ ಬಟ್ಟೆಯ ಆಯ್ಕೆಯನ್ನು ಪ್ರಶ್ನೆ ಮಾಡಿರುವ ಈ ವ್ಯಕ್ತಿ, ನನ್ನ ಹೆಂಡತಿಯ ಮುಖದ ಮೇಲೆ ಆಸಿಡ್ ಎರಚುವುದಾಗಿ ಬೆದರಿಕೆ ಹಾಕುತ್ತಿದ್ದಾನೆ. ಈ ರೀತಿಯ ಯಾವುದೇ ಘಟನೆ ನಡೆಯದಂತೆ ಈ ವ್ಯಕ್ತಿಯ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಿ’ ಎಂದು ಶಹಬಾಜ್ ಅನ್ಸಾರ್ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದು. ಇದನ್ನು ಡಿಜಿಪಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ. ಕೆ. ಶಿವಕುಮಾರ್ ಅವರಿಗೆ ಟ್ಯಾಗ್ ಕೂಡಾ ಮಾಡಿದ್ದಾರೆ.

ಈ ಸಂಸ್ಥೆಯಲ್ಲಿ (ಶೆಟ್ಟಿ ಕೆಲಸ ಮಾಡುತ್ತಿದ್ದ ಖಾಸಗಿ ಸಂಸ್ಥೆ) ಮಹಿಳೆಯರು ಸುರಕ್ಷಿತವಾಗಿಲ್ಲ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *