ಬಂಟ್ವಾಳ || ವ್ಯಕ್ತಿಗೆ ಮಾರಕಾಸ್ತ್ರದಿಂದ ಇರಿದು ದುಷ್ಕರ್ಮಿಗಳು ಪರಾರಿ

ಬಂಟ್ವಾಳ || ವ್ಯಕ್ತಿಗೆ ಮಾರಕಾಸ್ತ್ರದಿಂದ ಇರಿದು ದುಷ್ಕರ್ಮಿಗಳು ಪರಾರಿ

ಬಂಟ್ವಾಳ (ದಕ್ಷಿಣ ಕನ್ನಡ): ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಪೇಟೆಯ ಅಕ್ಕರಂಗಡಿ ಎಂಬಲ್ಲಿ ವ್ಯಕ್ತಿಯೊಬ್ಬರಿಗೆ ಮಾರಕಾಯುಧದಲ್ಲಿ ಇರಿದಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಇಲ್ಲಿನ ಅಕ್ಕರಂಗಡಿ ನಿವಾಸಿ ಹಮೀದ್ (38) ಗಾಯಗೊಂಡವರು.

ಅಕ್ಕರಂಗಡಿಯಲ್ಲಿದ್ದ ಪೈಂಟಿಂಗ್ ಕೆಲಸ ಮಾಡುತ್ತಿದ್ದ ಹಮೀದ್ ಯಾನೆ ಅಮ್ಮಿ ಅವರಿಗೆ ಬೈಕ್ನಲ್ಲಿ ಆಗಮಿಸಿದ ಆಗಂತುಕರು ಇರಿದು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಇರಿತದಿಂದ ಹಮೀದ್ ಅವರ ಕೈಗೆ ಆಳವಾದ ಗಂಭೀರ ಗಾಯವಾಗಿದ್ದು, ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಹಮೀದ್ ಅಲ್ಲಿರುವುದನ್ನು ಗಮನಿಸಿ, ಜನಸಂಚಾರ ವಿರಳವಾದ ಬಳಿಕ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ತಲವಾರು ಅಥವಾ ಚೂರಿಯಂತ ಹರಿತವಾದ ಆಯುಧದಲ್ಲಿ ದಾಳಿ ಮಾಡಿದ್ದಾರೆ. ನಗರ ಪೊಲೀಸ್ ಠಾಣೆ ಎಸ್.ಐ. ರಾಮಕೃಷ್ಣ ಮತ್ತು ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಘಟನೆಗೆ ಕಾರಣ ಏನು ಎಂಬುದು ಸದ್ಯಕ್ಕೆ ತಿಳಿದು ಬಂದಿಲ್ಲ.

Leave a Reply

Your email address will not be published. Required fields are marked *