BBMP ಸಹಾಯಕ ಇಂಜಿನಿಯರ್ ಸಸ್ಪೆಂಡ್..!

BBMP ಸಹಾಯಕ ಇಂಜಿನಿಯರ್ ಸಸ್ಪೆಂಡ್..!

ಬೆಂಗಳೂರು : ಗೇಟ್ ಬಿದ್ದು ಬಾಲಕ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ದತ್ತಾತ್ರೇಯ ವಾರ್ಡ್ನ ಸಹಾಯಕ ಎಂಜಿನಿಯರ್ ಟಿ. ಶ್ರೀನಿವಾಸ ರಾಜು ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಪಾಲಿಕೆ ಉಪಯುಕ್ತ ಅಡಳಿತ ವಿಭಾಗ ತಕ್ಷಣವೇ ಜಾರಿಗೆ ಬರುವಂತೆ ಅದೇಶ ಹೊರಡಿಸಿದೆ.ಕರ್ತವ್ಯ ನಿರ್ಲಕ್ಷ್ಯ, ಗೇಟ್ನ ಸಾಮರ್ಥ್ಯಕ್ಕೆ ತಕ್ಕಂತೆ ಕೀಲುಗಳನ್ನು ಅಳವಡಿಸದಿರುವುದು ಹಾಗೂ ಸರಿಯಾದ ನಿರ್ವಹಣೆ ಮಾಡಿಲ್ಲ ಎಂಬ ಕಾರಣದಿಂದ ಅಮಾನತು ಮಾಡಿ ಆದೇಶ ನೀಡಲಾಗಿದೆ. ಜೊತೆಗೆ, ಘಟನೆ ಬಗ್ಗೆ ವಿವರಣೆ ನೀಡುವಂತೆ ಕಾರ್ಯಪಾಲಕ ಇಂಜಿನಿಯರ್ ವೆಂಕಟೇಶ್ಗೆ ಕೂಡ ನೋಟಿಸ್ ನೀಡಲಾಗಿದೆ. ಮೂರು ದಿನಗಳಲ್ಲಿ ಉತ್ತರ ನೀಡುವಂತೆ ಸೂಚನೆ ನೀಡಲಾಗಿದೆ.

ಬಿಬಿಎಂಪಿ ಆಟದ ಮೈದಾನದ ಗೇಟ್ ಗೇಟ್ ಮೈಮೇಲೆ ಬಿದ್ದ ಪರಿಣಾಮ ಬಾಲಕ ಸಾವನ್ನಪ್ಪಿದ ಘಟನೆ ಮಲ್ಲೇಶ್ವರಂ ಠಾಣೆ ವ್ಯಾಪ್ತಿಯ ರಾಜಶಂಕರ್ ಆಟದ ಮೈದಾನದಲ್ಲಿ ಭಾನುವಾರ ನಡೆದಿತ್ತು. ಘಟನೆಯಲ್ಲಿ 11 ವರ್ಷದ ನಿರಂಜನ್ ಎಂಬ ಬಾಲಕ ಮೃತಪಟ್ಟಿದ್ದ. ಕಬ್ಬಿಣದ ಗೇಟ್ ಮೈಮೇಲೆ ಬಿದ್ದ ಪರಿಣಾಮ ತೀವ್ರ ಗಾಯಗೊಂಡು ಬಾಲಕ ಅಸುನೀಗಿದ್ದ.

Leave a Reply

Your email address will not be published. Required fields are marked *