ಹುಷಾರ್​! ಬೆಂಗಳೂರಿನ ಕಟ್ಟಡ ಮಾಲೀಕರಿಗೆ ಖಡಕ್​​ ಎಚ್ಚರಿಕೆ ಕೊಟ್ಟ ಡಿಕೆ ಶಿವಕುಮಾರ್. | FIRE ACCIDENT

ಹುಷಾರ್​! ಬೆಂಗಳೂರಿನ ಕಟ್ಟಡ ಮಾಲೀಕರಿಗೆ ಖಡಕ್​​ ಎಚ್ಚರಿಕೆ ಕೊಟ್ಟ ಡಿಕೆ ಶಿವಕುಮಾರ್. | FIRE ACCIDENT

ಬೆಂಗಳೂರು: ಶನಿವಾರ ನಗರ್ತಪೇಟೆಯಲ್ಲಿ ಸಂಭವಿಸಿರುವ ಘೋರ ಅಗ್ನಿ ದುರಂತ  ಐವರನ್ನ ಬಲಿ ಪಡೆದಿದೆ. ಹಲವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್ ಇಲ್ಲಿ ಅವೈಜ್ಞಾನಿಕವಾಗಿ ಕಟ್ಟಡಗಳನ್ನು ಕಟ್ಟಿದ್ದಾರೆ. ಅನಧಿಕೃತ ಕಟ್ಟಡಗಳಿಗೆ ನೋಟಿಸ್ ನೀಡುವಂತೆ ಬಿಬಿಎಂಪಿ ಸೂಚನೆ ನೀಡಿದ್ದು, ಅಕ್ರಮವಾಗಿ ಕಟ್ಟಡ ನಿರ್ಮಿಸಿದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಖಡಕ್​ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನ ನಗರ್ತಪೇಟೆಯ ಕಟ್ಟಡ ಒಂದರಲ್ಲಿ ಶನಿವಾರ ಘೋರ ಘಟನೆ ನಡೆದು ಹೋಗಿದೆ. ಬೆಂಕಿ ಅವಘಡ ಸಂಭವಿಸಿ ಐವರು ಮೃತಪಟ್ಟಿದ್ದಾರೆ. ಈ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ದುರಂತದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಜೊತೆಗೆ ಕಟ್ಟಡ ಮಾಲೀಕರಿಗೆ ಖಡಕ್ ಎಚ್ಚರಿಕೆ ಕೂಡ ನೀಡಿದ್ದಾರೆ.

ಈ ಪರಿಸ್ಥಿತಿಗೆ ಸಾರ್ವಜನಿಕರನ್ನೇ ದೂರಬೇಕು: ಡಿ.ಕೆ.ಶಿವಕುಮಾರ್

ಇಂದು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಅಗ್ನಿ ಅವಘಡ ಸಂಭವಿಸಿದ ಕಟ್ಟಡ ಪರಿಶೀಲನೆ ಮಾಡಿದರು. ದುರಂತ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಕ್ರವಾಗಿ ಈ ಕಟ್ಟಡ ಕಟ್ಟಲಾಗಿದೆ. ಈ ಪರಿಸ್ಥಿತಿಗೆ ನಮ್ಮ ಸಾರ್ವಜನಿಕರನ್ನೇ ದೂರಬೇಕು ಎಂದಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *