ಬೆಂಗಳೂರು : ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳವಾರ ದೆಹಲಿಗೆ ಹೋಗಿದ್ದಾರೆ. ಕಾಂಗ್ರೆಸ್ ಪಕ್ಷದ ಮಂತ್ರಿಗಳಾಗಲೀ, ಶಾಸಕರಾಗಲೀ ದೆಹಲಿಗೆ ಭೇಟಿ ನೀಡಿದಾಗ ಅದು ಸಹಜವಾಗೇ ಕುತೂಹಲಕ್ಕೆ ಕಾರಣವಾಗುತ್ತದೆ. ಶಿವಕುಮಾರ್ ಭೇಟಿಗೆ ಸಂಬOಧಿಸಿದOತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಕೇಳಿದಾಗ, ಪಕ್ಷದ ಕೆಲಸಗಳಿಗೆ ಅವರು ಹೋಗಿರಬಹುದು, ಎಸ್ಸಿ ಎಸ್ಟಿ ಸಮುದಾಯಗಳಿಗೆ ಸೇರಿದ ಶಾಸಕರು ಮತ್ತು ಮುಖಂಡರು ನಡೆಸಿದ ಸಭೆಗೂ ಶಿವಕುಮಾರ್ ಭೇಟಿಗೂ ಸಂಬOಧವಿಲ್ಲ ಎಂದು ಹೇಳಿದರು.

ಗೃಹ ಸಚಿವ ಡಾ. ಜಿ ಪರಮೇಶ್ವರ್ ನೇತೃತ್ವದಲ್ಲಿ ನಮ್ಮ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್ಸಿ ಮಹದೇವಪ್ಪ ನಿವಾಸದಲ್ಲಿ ಸಭೆ ಸೇರಲಾಗಿತ್ತು ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
ದೆಹಲಿಗೆ ಹಾರಲಿರುವ ಡಿಸಿಎಂ ಡಿ.ಕೆ ಶಿವಕುಮಾರ್
ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಮಂಗಳವಾರ ಬೆಳಿಗ್ಗೆ ಪ್ರತಿಕ್ರಿಯೆ ನೀಡಿದ ಡಿ ಕೆ ಶಿವಕುಮಾರ್ ಅವರು ಪೆನ್ನಾರ್ ನದಿ ನೀರು ಹಾಗೂ ಕೋಲಾರ ಭಾಗದಿಂದ ತಮಿಳುನಾಡಿನ ಕಡೆಗೆ ಹರಿಯುವ ನೀರಿನ ವಿವಾದದ ಕುರಿತು ಕೇಂದ್ರ ಜಲಶಕ್ತಿ ಸಚಿವರ ಜೊತೆ ಚರ್ಚೆ ನಡೆಸಲು ದೆಹಲಿಗೆ ಭೇಟಿ ನೀಡಲಾಗುತ್ತಿದೆ” ಎಂದು ಅವರು ತಿಳಿಸಿದರು.
“ಪೆನ್ನಾರ್ ನದಿ ನೀರಿನ ವಿಚಾರವಾಗಿ ಎರಡು ರಾಜ್ಯಗಳ ಪ್ರತಿನಿಧಿಗಳನ್ನು ಸೇರಿಸಿ ನಿಮ್ಮಲ್ಲೇ ಚರ್ಚೆ ನಡೆಸಿ ಬಗೆಹರಿಸಿಕೊಳ್ಳಿ ಎನ್ನುವ ಸುಪ್ರೀಂ ಕೋರ್ಟ್ ನಿರ್ದೇಶನವಿತ್ತು. ಆದರೆ ಸೋಮವಾರ ರಾತ್ರಿ ತಮಿಳುನಾಡಿನ ಪ್ರತಿನಿಧಿಗಳು ಬರುವುದಿಲ್ಲ, ಅವರು ಪ್ರತ್ಯೇಕವಾಗಿ ಮನವಿ ಸಲ್ಲಿಸುತ್ತಾರೆ ಎನ್ನುವ ಸಂದೇಶವಿದೆ. ಅಲ್ಲಿಗೆ ಹೋದಾಗ ಇದರ ಸತ್ಯಾಸತ್ಯತೆ ತಿಳಿಯುತ್ತದೆ. ಆದರೆ ನಾನು ಆಹ್ವಾನವನ್ನು ತಿರಸ್ಕರಿಸಬಾರದು ಎಂದು ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ” ಎಂದರು.
“ಜೊತೆಗೆ ಇತರೇ ಇಲಾಖೆಗಳ ಸಚಿವರು, ಅರಣ್ಯ ಇಲಾಖೆಯ ಸಚಿವರನ್ನು ಸಮಯ ಸಿಕ್ಕರೆ ಭೇಟಿ ಮಾಡಿ ಚರ್ಚೆ ನಡೆಸಲಾಗುವುದು” ಎಂದು ಹೇಳಿದರು.
ಕಾಮಗಾರಿ ವೇಳೆ ವಿದ್ಯುತ್ ಕಂಬ ಬಿದ್ದು ಮಹಿಳೆಯರು ಮೃತಪಟ್ಟಿರುವ ವಿಚಾರದ ಬಗ್ಗೆ ಕೇಳಿದಾಗ, “ಕಾಮಗಾರಿ ಸ್ಥಳಗಳಲ್ಲಿ ಈ ರೀತಿಯ ಅವಘಡಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚನೆ ನೀಡುತ್ತೇನೆ” ಎಂದು ತಿಳಿಸಿದರು.