“ಸಚಿವೆ ತಪ್ಪು ಲೆಕ್ಕ ಕೊಟ್ಟರಾ?” – 5 ಸಾವಿರ ಕೋಟಿ ಎಲ್ಲಿಗೆ ಹೋಯ್ತು ಎಂದು ವಿಪಕ್ಷ ಪ್ರಶ್ನೆ
ಬೆಳಗಾವಿ: ಸಿದ್ದರಾಮಯ್ಯ ಸರ್ಕಾರ ಪಂಚ ಗ್ಯಾರಂಟಿಗಳಲ್ಲಿ ಮನೆ ಯಜಮಾನಿಗೆ ಪ್ರತಿ ತಿಂಗಳ 2000 ರೂ. ನೀಡುವ ಗೃಹ ಲಕ್ಷ್ಮೀ ಯೋಜನೆ ಒಂದಾಗಿದೆ. ಆದ್ರೆ, ಕೆಲ ತಿಂಗಳುಗಳಿಂದ ಮಹಿಳೆಯರ ಖಾತೆಗೆ ಗೃಹ ಲಕ್ಷ್ಮೀ ಹಣ ಜಮೆ ಆಗಿಲ್ಲ. ಈ ಸಂಬಂಧ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಅವರು ಅಧಿವೇಶನದಲ್ಲಿ ಗಮನಸೆಳೆದಿದ್ದಾರೆ. ಆದ್ರೆ, ಈ ಬಗ್ಗೆ ಮಹಿಳಾ ಮತ್ತು ಮಕ್ಕಳು ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಪ್ಪು ಲೆಕ್ಕಾ ಕೊಟ್ಟಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಗೃಹ ಲಕ್ಷ್ಮೀ ಹಣವನ್ನು ಆಗಸ್ಟ್ ತಿಂಗಳವರೆಗೂ ನೀಡಿದ್ದೇವೆ ಎಂದು ಸಚಿವರು ಹೇಳಿದ್ದಾರೆ. ಆದ್ರೆ, ಆಗಸ್ಟ್ ವರೆಗೂ ಹಣ ಬಿಡುಗಡೆ ಮಾಡಿಲ್ಲ. ಈ ಸಂಬಂಧ ಮಹೇಶ್ ಟೆಂಗಿನಕಾಯಿ ಅವರು ಸದನದಲ್ಲಿಂದು ಸರ್ಕಾರದ ಅಧಿಕೃತ ದಾಖಲೆ ಬಿಡುಗಡೆ ಮಾಡಿದ್ದು, ಫೆಬ್ರವರಿ, ಮಾರ್ಚ್ ತಿಂಗಳ ಹಣ ಬಿಡುಗಡೆ ಮಾಡಿಲ್ಲದಿರುವುದು ದಾಖಲೆ ಮೂಲಕ ಬಹಿರಂಗವಾಗಿದೆ. ಹಾಗಾದ್ರೆ, ಐದು ಸಾವಿರ ಕೋಟಿ ರೂಪಾಯಿ ಎಲ್ಲೋಯ್ತು ಎಂದು ವಿಪಕ್ಷ ಪ್ರಶ್ನಿಸಿದೆ.
ಈ ಬಗ್ಗೆ ಸ್ಲೀಕರ್ಗೆ ಪತ್ರ
ಈ ಸಂಬಂಧ ಮಹೇಶ್ ಟೆಂಗಿನಕಾಯಿ ಅವರು ಸ್ಪೀಕರ್ ಯುಟಿ ಖಾದರ್ ಅವರಿಗೆ ಪತ್ರ ಬರೆದಿದ್ದು, ಆಗಸ್ಟ್ 2025ರ ವರೆಗೆ ಗೃಹ ಲಕ್ಷ್ಮಿ ಹಣ ಬಿಡುಗಡೆ ಮಾಡಲಾಗಿದೆ ಎಂದು ಉತ್ತರಿಸಿದ್ದಾರೆ. ಆದರೆ ಬಿಡುಗಡೆ ಮಾಡಿಲ್ಲ ಎಂಬುದಕ್ಕೆ ನನ್ನ ಸರ್ಕಾರಿ ದಾಖಲೆ ಇದೆ. ಸದನಕ್ಕೆ ಸಚಿವರು ತಪ್ಪು ಮಾಹಿತಿ ನೀಡುತ್ತಿದ್ದಾರೆ . ಸದನದ ಹಕ್ಕು ಮತ್ತು ಗೌರವ ತೋರಿದ ಅಗೌರವ. ಈ ವಿಚಾರವಾಗಿ ತುರ್ತಾಗಿ ಸದನದಲ್ಲಿ ಮಾತನಾಡಲು ಅವಕಾಶ ಕೋಡಿ ಎಂದು ಪತ್ರ ಬರೆದಿದ್ದಾರೆ.
For More Updates Join our WhatsApp Group :



