BJP ಮುಖಂಡ ವೆಂಕಟೇಶ್ ಕೊ* ಕೇಸ್‌ಗೆ ಬಿಗ್ ಟ್ವಿಸ್ಟ್: ‘ಸ್ನೇಹ’ದ ಹೆಸರಿನಲ್ಲಿ ದ್ರೋಹ ಮಾಡಿದ ಇಬ್ಬರ ಬಂಧನ!

BJP ಮುಖಂಡ ವೆಂಕಟೇಶ್ ಕೊ* ಕೇಸ್‌ಗೆ ಬಿಗ್ ಟ್ವಿಸ್ಟ್: ‘ಸ್ನೇಹ’ದ ಹೆಸರಿನಲ್ಲಿ ದ್ರೋಹ ಮಾಡಿದ ಇಬ್ಬರ ಬಂಧನ!

ಕೊಪ್ಪಳ: ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸಿದ್ದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಕುರುಬರ  ಹತ್ಯೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್​​ ಸಿಕ್ಕಿದೆ. ಕೊಲೆಗೆ ಸಾಥ್ ನೀಡಿದ್ದ ವೆಂಕಟೇಶ್​​ನ ಇಬ್ಬರು ಸ್ನೇಹಿತರಾದ ಶರಣಬಸವ ಹಾಗೂ ಮಲ್ಲಿಕಾರ್ಜುನ ನನ್ನು ಪೊಲೀಸರು ಬಂಧಿಸಿದ್ದಾರೆ. ವೆಂಕಟೇಶ್​​ನ ಜೊತೆಗೆ ಇದ್ದುಕೊಂಡು ಹತ್ಯೆ ಮಾಸ್ಟರ್ ಮೈಂಡ್ ರವಿಗೆ ಆರೋಪಿಗಳು ಮಾಹಿತಿ ನೀಡಿದ್ದು ಬಯಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪ್ರಮುಖ ಆರೋಪಿ ರವಿ ಸೇರಿದಂತೆ 10 ಆರೋಪಿಗಳನ್ನು ಬಂಧಿಸಲಾಗಿದೆ. ಕೊಲೆಯಾಗಿರುವ ವೆಂಕಟೇಶ್​ ಹಾಗೂ ರವಿ ನಡುವೆ ನಡೆದ ಸಂಭಾಷಣೆಯಲ್ಲಿ ನೀನು ಸಾಕಿದ ನಾಯಿಗಳ ಬಗ್ಗೆ ಎಚ್ಚರವಾಗಿರು ಎಂದು ರವಿ ಹೇಳಿದ್ದ.

ವೆಂಕಟೇಶ್ ಕೊಲೆಯಾಗುವ ಮುನ್ನ ಮಾಸ್ಟರ್ ಮೈಂಡ್ ರವಿ ಜೊತೆ ಆರೋಪಿಗಳು ಸಂಪರ್ಕದಲ್ಲಿದ್ದರು.  ರವಿ ಜೊತೆ 40 ನಿಮಿಷಕ್ಕೂ ಹೆಚ್ಚು ಕಾಲ ಮೂರು ದಿನ ಮೊದಲೇ ಮಲ್ಲಿಕಾರ್ಜುನ ಮಾತಾಡಿದ್ದ. ವೆಂಕಟೇಶ್ ಹತ್ಯೆ ವಿಚಾರ ಆಪ್ತ ಸ್ನೇಹಿತರಿಗೆ ಮೊದಲೇ ತಿಳಿದಿತ್ತು.

ಗಂಗಾವತಿಗೆ ಬಂದಿದ್ದ ಹಂತಕರಿಗೆ ವೆಂಕಟೇಶ್ ಇರುವ ಜಾಗ ಸೇರಿದಂತೆ ಎಲ್ಲಾ ಮಾಹಿತಿಯನ್ನು ಈ ಆಪ್ತ ಸ್ನೇಹಿತರು ನೀಡಿದ್ದರು. ವೆಂಕಟೇಶ್​ ಜೊತೆಯಲ್ಲೇ ಇದ್ದು ಆತನ ಚಲನವಲನದ ಮಾಹಿತಿ ನೀಡಿದ್ದರು. ನಿತ್ಯ ಜೊತೆಗೆ ಇರುತ್ತಿದ್ದು, ಕೊಲೆಯಾಗುವ ದಿನ ಮಾತ್ರ ಕಾರಣ ಹೇಳಿ ವೆಂಕಟೇಶ್ ನನ್ನ ಬಿಟ್ಟು ಬಂದಿದ್ದರು. ಸದ್ಯ ಇಬ್ಬರು ಆರೋಪಿಗಳನ್ನ ಬಂಧಿಸಿರುವ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *