ಮುಂದಿನ ಭಾನುವಾರ ಧರ್ಮಸ್ಥಳಕ್ಕೆ BJP ತಂಡ: ವಿಜಯೇಂದ್ರ

ರ್ಕಾರದ ವಿರುದ್ಧ ಕೇಸರಿ ಪಡೆ 'ಧರ್ಮ ಯುದ್ಧ' , ಯಾರು ಈ ಷಡ್ಯಂತ್ರದ ಹಿಂದೆ?

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಪಕ್ಷದ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರ ಗುಂಪು ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಭೇಟಿ ನೀಡಲಿದೆ.

ಈ ಭೇಟಿಯ ಉದ್ದೇಶ ಮಂಜುನಾಥೇಶ್ವರ ದೇವರ ದರ್ಶನ ಪಡೆಯುವುದು ಎಂದು ವಿಜಯೇಂದ್ರ ಹೇಳಿದ್ದಾರೆ. ಆದರೆ, ಧರ್ಮಸ್ಥಳದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಎಸ್ಐಟಿ ತನಿಖೆ ಮತ್ತು ಅದರ ಸುತ್ತಮುತ್ತಲಿನ ರಾಜಕೀಯ ಚರ್ಚೆಗಳ ಹಿನ್ನೆಲೆಯಲ್ಲಿ ಈ ಭೇಟಿಗೆ ರಾಜಕೀಯ ಮಹತ್ವವನ್ನೂ ಕಲ್ಪಿಸಲಾಗಿದೆ. ವಿಜಯೇಂದ್ರ ಅವರು ಎಸ್ಐಟಿ ತನಿಖೆ ಶೀಘ್ರವಾಗಿ ಮುಗಿಯಬೇಕು ಮತ್ತು ಸತ್ಯ ಬಹಿರಂಗಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಅಲ್ಲದೆ, ಈ ತನಿಖೆಯ ಹಿಂದೆ ಕೆಲವು ಸಮಾಜಘಾತಕ ಶಕ್ತಿಗಳು ಕುತಂತ್ರ ನಡೆಸುತ್ತಿವೆ ಎಂಬ ಚರ್ಚೆಗಳಿಗೆ ಪ್ರತಿಕ್ರಿಯಿಸುವ ಸಂಕೇತವಾಗಿ ಈ ಭೇಟಿ ಹಮ್ಮಿಕೊಳ್ಳಲಾಗಿದೆ ಎಂದಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *