ಬೆಳಿಗ್ಗೆ BMTC ಬಸ್ ಅಪ*ತ.

ಬೆಳಿಗ್ಗೆ BMTC ಬಸ್ ಅಪ*ತ.

ಟ್ರ್ಯಾಕ್ಟರ್​ಗೆ  ಡಿ* ಹೊಡೆದು ಕಾಂಪೌಂಡ್ ಗೇಟ್​​ಗೆ ಗುದ್ದಿತು.

ಬೆಂಗಳೂರು : ಬೆಂಗಳೂರಿನ ಕಾವೇರಿ ಜಂಕ್ಷನ್‌ನಲ್ಲಿ ಶನಿವಾರ ಮುಂಜಾನೆ ಬಿಎಂಟಿಸಿ ಬಸ್ಸೊಂದು ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್​ಗೆ ಗುದ್ದಿದೆ. ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ. ಯಲಹಂಕ ನ್ಯೂಟೌನ್‌ನಿಂದ ಮೆಜೆಸ್ಟಿಕ್‌ಗೆ ತೆರಳುತ್ತಿದ್ದ ಬಿಎಂಟಿಸಿ ಬಸ್, ಫುಟ್‌ಪಾತ್ ಬಳಿ ಕಸ ತುಂಬಿಸುತ್ತಿದ್ದ ಟ್ರ್ಯಾಕ್ಟರ್‌ಗೆ ಗುದ್ದಿದೆ.

ದಟ್ಟವಾದ ಮಂಜಿನ ಕಾರಣ ಟ್ರ್ಯಾಕ್ಟರ್ ಗಮನಕ್ಕೆ ಬರದೆ ಅಪ*ತ ಸಂಭವಿಸಿದ್ದಿರಬಹುದು ಎಂದು ಶಂಕಿಸಲಾಗಿದೆ. ಈ ಘಟನೆಯಲ್ಲಿ ಬಸ್‌ನ ಮುಂಭಾಗ ಜಖಂಗೊಂಡಿದ್ದು, ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಅಪಾಯ ಸಂಭವಿಸಿಲ್ಲ. ಮಾಹಿತಿ ಪಡೆದ ಸದಾಶಿವನಗರ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಬಸ್ ತೆರವು ಕಾರ್ಯ ನಡೆಸಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *