ಕ್ಯಾಂಟರ್ ಲಾರಿ  ಬೈಕ್  ನಡುವೆ ಅಪಘಾತ : ಒಂದೇ ಕುಟುಂಬದ ನಾಲ್ವರು ಸಾವು

ಬೆಂಗಳೂರು || ವಾಹನ ಚಕ್ರ ಹರಿದು 5 ವರ್ಷದ ಮಗು ಸಾವು

ಉಡುಪಿ: ಕ್ಯಾಂಟರ್ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೋಮವಾರ ಕಾರ್ಕಳ – ಧರ್ಮಸ್ಳಳ – ಸುಬ್ರಹ್ಮಣ್ಯ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ ಈ ದುರ್ಘಟನೆ ನಡೆದಿದೆ.

ಮೃತರನ್ನು ಸುರೇಶ ಆಚಾರ್ಯ (36), ಸಮೀಕ್ಷಾ (7), ಸುಶ್ಮಿತಾ (5) ಹಾಗೂ ಸುಶಾಂತ್ (2) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಪತ್ನಿ ಮೀನಾಕ್ಷಿ ಆಚಾರ್ಯ (32) ಎಂಬವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ.

ಬೈಕಿನಲ್ಲಿ ಪತಿ, ಪತ್ನಿ ಮತ್ತು ಮೂವರು ಮಕ್ಕಳು ತೆರಳುತ್ತಿದ್ದರು. ಇವರಲ್ಲಿ ನಾಲ್ಕು ಮಂದಿ ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *