ಬಂಟ್ವಾಳದಲ್ಲಿ ಆಂಬುಲೆನ್ಸ್ ತಡೆದ ಬೈಕ್ ಸವಾರನಿಗೆ 14 ದಿನ ನ್ಯಾಯಾಂಗ ಬಂಧನ.

ಬಂಟ್ವಾಳ : ಬಿಸ್ಲೆ ಘಾಟ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್‌ಗೆ ದಾರಿ ಬಿಡದ ಬೈಕ್ ಸವಾರನ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಆಂಬುಲೆನ್ಸ್ ಸಿಬ್ಬಂದಿ ಈ ಘಟನೆಗೆ ಸಂಬಂಧಿಸಿದ ವಿಡಿಯೋ…

ವರದಕ್ಷಿಣ ಹಿಂಸೆಗೆ ಯುವತಿ ಬ* – ಪೋಷಕರು ಗಂಭೀರ ಆರೋಪ

ಶಿವಮೊಗ್ಗ: ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಎನ್.ಆರ್.ಪುರ ಮೂಲದ ಗೃಹಿಣಿ ಮೃತಪಟ್ಟಿದ್ದು, ಪತಿ ಮನೆಯವರೇ ಕೀಟನಾಶಕ ಕೊಟ್ಟು ಮಗಳನ್ನ ಕೊಲೆ ಮಾಡಿದ್ದಾರೆ ಎಂದು ಮಹಿಳೆಯ ಪೋಷಕರು ಆರೋಪಿಸಿದ್ದಾರೆ. ಚಿಕಿತ್ಸೆ…

ಚಿಕ್ಕಮಗಳೂರಿನಲ್ಲಿ ಆನೆ ದಾಳಿ: ಇಬ್ಬರ ಸಾ*, ಗ್ರಾಮಸ್ಥರು ಅರಣ್ಯ ಇಲಾಖೆಯನ್ನು ಆರೋಪಿಸಿ ಪ್ರತಿಭಟನೆ.

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಕೆರೆಕಟ್ಟೆ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟ ಘಟನೆ ಸಂಬಂಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಅರಣ್ಯ ಇಲಾಖೆಯ ನಿರ್ಲಕ್ಷ್ಯ ಮತ್ತು ಅಧಿಕಾರಿಗಳ…

ಮಹಿಳೆಗೆ ಲೈಂಗಿಕ ಕಿರುಕುಳ: ಬೆಂಗಳೂರು ವಿಶ್ವವಿದ್ಯಾಲಯದ ಮಾಜಿ ಪ್ರೊ. ಬಿ.ಸಿ. ಮೈಲಾರಪ್ಪ ಬಂಧನ.

ಬೆಂಗಳೂರು: ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಬೆಂಗಳೂರಿನ ವಿಶ್ವವಿದ್ಯಾಲಯದ ಮಾಜಿ ನಿರ್ದೇಶಕ ಹಾಗೂ ಪ್ರಾಧ್ಯಾಪಕ ಪ್ರೊ. ಬಿ.ಸಿ. ಮೈಲಾರಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬಸವೇಶ್ವರನಗರ ಠಾಣೆಯಲ್ಲಿ ಮಹಿಳೆ ನೀಡಿದ…

ಬೆಂಗಳೂರಿನಲ್ಲಿ ಬೇಜವಾಬ್ದಾರಿ ಬೈಕ್ ಸವಾರ: ಹೆಲ್ಮೆಟ್ ಇಲ್ಲ, ಫೋನ್‌ನಲ್ಲಿ ಮಾತನಾಡಿ ಕಾರಿಗೆ ಡಿ*!

ಬೆಂಗಳೂರು: ಬೆಂಗಳೂರಿನಲ್ಲಿ ರಸ್ತೆ ಸುರಕ್ಷತೆ ಎಷ್ಟಿದೆ? ಎಂಬ ಪ್ರಶ್ನೆಗಳು ಮೂಡಿದೆ. ದಿನಕ್ಕೊಂದು ರಸ್ತೆ ಅಪಘಾತಗಳು ನಡೆಯುತ್ತಲೇ ಇರುತ್ತದೆ. ಅದಕ್ಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿರುವ ಅನೇಕ ವಿಡಿಯೋಗಳು ಸಾಕ್ಷಿಯಾಗಿದೆ. ಈ ರೀತಿಯ ಬೇಜವ್ದಾರಿತನದ ರಸ್ತೆ ಸಂಚಾರವೇ ಕಾರಣ, ಇಲ್ಲೊಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಈ ವಿಡಿಯೋದಿಂದಲ್ಲೇ ಬೆಂಗಳೂರಿನಲ್ಲಿ ಸುರಕ್ಷತೆ ಎಷ್ಟಿದೆ ಎಂಬುದು ತಿಳಿಯುತ್ತದೆ. ಅಡ್ಡಾದಿಡ್ಡಿ ವಾಹನ ಚಾಲನೆ ಮಾಡುವುದರಿಂದ ದಿನಕ್ಕೊಂದು ಅಪಘಾತಗಳು ನಡೆಯುತ್ತ ಇರುತ್ತದೆ. ಬೆಂಗಳೂರಿನಲ್ಲಿ ಇಂತಹ ಅಜಾಗರೂಕ ಚಾಲನೆಗಳು ಜನರಲ್ಲಿ ಕಳವಳ ಮೂಡಿಸಿದೆ. ಯೂಟ್ಯೂಬರ್ ಒಬ್ಬರು ತಮ್ಮ ಕಣ್ಮುಂದೆಯೇ ನಡೆದ ಘಟನೆಯೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದೆ. ಬೈಕ್ ಸವಾರನೊಬ್ಬ ಫೋನ್‌ನಲ್ಲಿ ಮಾತನಾಡುತ್ತಾ ರಸ್ತೆ ಕ್ರಾಸ್​​ ಮಾಡುವ ವೇಳೆ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಕಾರಿನ ಡ್ಯಾಶ್‌ಕ್ಯಾಮ್ ಕ್ಯಾಮರ್​​ದಲ್ಲಿ ಈ ದೃಶ್ಯ ಸೆರೆಯಾಗಿದೆ. ಈ ವಿಡಿಯೋದಲ್ಲಿ ಬೈಕ್​​ ಸವಾರ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸದೆ ಬೈಕ್​ ಚಲಿಸಿದ್ದಾನೆ. ಬೈಕ್​​ನಲ್ಲಿ ಮಿರರ್​​​​​ ಇಲ್ಲ, ಬೈಕ್​​ ಹಿಂದೆ ಕುತಿರುವ ವ್ಯಕ್ತಿ ಹಾಗೂ ಸವಾರ, ಇಬ್ಬರು ಹೆಲ್ಮೆಟ್​​​ ಕೂಡ ಧರಿಸಿಲ್ಲ. ಇನ್ನೊಂದು ಕಡೆ ವಿರುದ್ಧ ದಿಕ್ಕಿನಿಂದ ಕಾರನ್ನು ತಪ್ಪಿಸಲು ಹೋಗಿ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಈ ಅಪಘಾತದಿಂದ ಯಾವುದೇ ತೊಂದರೆಗಳು ಆಗಿಲ್ಲ. ಆದರೆ ಇದು ಸಂಚಾರಿ ನಿಯಮಗಳಿಗೆ ವಿರುದ್ಧವಾಗಿದೆ. ಸೋಶಿಯಲ್​​ ಮೀಡಿಯಾದಲ್ಲಿ ಬೈಕ್ ಸವಾರನ ನಿರ್ಲಕ್ಷ್ಯ ವರ್ತನೆ ಇದಕ್ಕೆ ಕಾರಣ ಎಂದು ಹೇಳಲಾಗಿದೆ. ಇನ್ನು ವಿಡಿಯೋವನ್ನು ಎಕ್ಸ್​​​ ಖಾತೆಯಲ್ಲಿ ಹಂಚಿಕೊಂಡಿದ್ದು, ಬೈಕ್​​ ಸವಾರ ಫೋನ್‌ನಲ್ಲಿ ಮಾತನಾಡುತ್ತಿರುವ ಮತ್ತು ಹೆಲ್ಮೇಟ್​ ಧರಿಸದೇ ಇರುವುದು ಎಷ್ಟು ಸರಿ? ಇದಕ್ಕೆ ಏನ್​​ ಹೇಳುತ್ತಿರಾ? ಎಂದು ವಿಡಿಯೋ ಪೋಸ್ಟ್​ಗೆ ಶೀರ್ಷಿಕೆ ನೀಡಿದ್ದಾರೆ. ಅನೇಕ ಬಳಕೆದಾರರು ಬೈಕ್ ಸವಾರನ ಬೇಜವಾಬ್ದಾರಿ ವರ್ತನೆಯನ್ನು ಖಂಡಿಸಿದ್ದು, ಕಾರು ಚಾಲಕನ ಸಮಯಪ್ರಜ್ಞೆಯನ್ನು ಶ್ಲಾಘಿಸಿದ್ದಾರೆ. ಇನ್ನು ಕೆಲವರು ಬೈಕ್​ ಸವಾರನ್ನು ಮಾಹಿತಿಯನ್ನು ಪಡೆದು, ಆತ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಹೇಳಿದ್ದಾರೆ. For…

 “ಮಗನ ತಪ್ಪಿಗೆ ನಾನು ಕ್ಷಮೆ ಕೇಳುತ್ತೇನೆ” ಎಂದ ತಂದೆ ವಿಜುಗೌಡ!

ವಿಜಯಪುರ: ಕನ್ನೊಳ್ಳಿ ಗ್ರಾಮದ ಬಳಿಯ ಟೋಲ್‌ನಲ್ಲಿ ಬಿಜೆಪಿ ಮುಖಂಡ ವಿಜು ಗೌಡ ಪಾಟೀಲ್ ​​ ಪುತ್ರ ಸಮರ್ಥ ಗೌಡ ಮತ್ತು ಗೆಳೆಯರಿಂದ ಟೋಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆದಿತ್ತು.…

ದೇವನಹಳ್ಳಿಯಲ್ಲಿ ಒಂದೇ ಕುಟುಂಬದ ನಾಲ್ವರಿಂದ ಸಾಮೂಹಿಕ ಆತ್ಮ*ತ್ಯೆಗೆ ಯತ್ನ.!

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಹೆಗ್ಗನಹಳ್ಳಿಯಲ್ಲಿ ಪೌರೋಹಿತ್ಯ ಮಾಡ್ಕೊಂಡಿದ್ದ ಬ್ರಾಹ್ಮಣ ಸಮುದಾಯದ ಕುಮಾರಪ್ಪ ಎಂಬವರ ಇಡೀ ಕುಟುಂಬ ಗುರುವಾರ ಆತ್ಮಹತ್ಯೆಗೆ ಯತ್ನಿಸಿದ್ದು, ಇಡೀ ಗ್ರಾಮದ ಜನತೆಯನ್ನು ಬೆಚ್ಚಿಬೀಳಿಸಿದೆ. ಘಟನೆಯಲ್ಲಿ…

ತಮ್ಹಿನಿ ಘಾಟ್ ದುರಂತ: ಕಾರಿನ ಸನ್ರೂಫ್ ಮೇಲೆ ಬಿದ್ದ ಬಂಡೆ — ಮಹಿಳೆ ಸ್ಥಳದಲ್ಲೇ ಸಾ*.!

ಮಹಾರಾಷ್ಟ್ರ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಕೊಂಡಿಥರ್ ಗ್ರಾಮದ ಬಳಿಯ ತಮ್ಹಿನಿ ಘಾಟ್‌ನಲ್ಲಿ ಬಂಡೆಯೊಂದು ಕಾರಿನ ಮೇಲೆ ಬಿದ್ದು 43 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಪುಣೆ ನಿವಾಸಿ ಸ್ನೇಹಲ್…

ಟೋಲ್ ಹಣ ಕೇಳಿದ್ದಕ್ಕೆ ಸಿಬ್ಬಂದಿಗೆ ಥಳಿಸಿದ BJP ಮುಖಂಡ ವಿಜು ಗೌಡ ಪಾಟೀಲ್ ಪುತ್ರ!

ವಿಜಯಪುರ : ಬಿಜೆಪಿ ಮುಖಂಡ ವಿಜು ಗೌಡ ಪಾಟೀಲ್​  ಪುತ್ರ ಸಮರ್ಥ ಗೌಡ ಮತ್ತು ಗೆಳೆಯರಿಂದ ಟೋಲ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವಂತಹ ಘಟನೆ ಜಿಲ್ಲೆಯ ಕನ್ನೊಳ್ಳಿ ಗ್ರಾಮದ ಬಳಿಯ…

ಆನೇಕಲ್‌ ಬರ್ಥ್‌ಡೇ ಪಾರ್ಟಿ ಕೊ*ಲೆಯಲ್ಲಿ ಅಂತ್ಯ!

ಆನೇಕಲ್: ಬರ್ತ್​​ಡೇ ಪಾರ್ಟಿ ಬಿಲ್​​ ಕೊಡುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಸ್ನೇಹಿತರಿಂದಲೇ ಬರ್ತ್​​ಡೇ ಬಾಯ್ ಕೊಲೆಯಾದ  ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹಾರಗದ್ದೆ ವಡ್ಡರಪಾಳ್ಯದಲ್ಲಿ ನಡೆದಿದೆ. ಸಂದೀಪ್(23) ಕೊಲೆಯಾದ…