ರಾಜ್ಯದಲ್ಲಿ ಇದುವರೆಗೆ ಯಾವುದೇ ಅಹಿತಕರ ಘಟನೆ ಜರುಗಿಲ್ಲ: G. Parameshwar.

ಬೆಂಗಳೂರು: ಸಾರಿಗೆ ನೌಕರರು ಇಂದಿನಿಂದ ಆರಂಭಿಸಿರುವ ಅನಿರ್ದಾಷ್ಟಾವಧಿ ಮುಷ್ಕರ ಸಾಮಾನ್ಯ ಜನಜೀವನ ಮೇಲೆ ಭಾರೀ ಪರಿಣಾಮ ಬೀರಿದೆ. ರಾಜ್ಯ ಗೃಹ ಸಚಿವ ಜಿ ಪರಮೇಶ್ವರ್ ಹೇಳುವ ಹಾಗೆ ರಾಜ್ಯದ ಯಾವುದೇ…

Hebbal Flyover Works ಯನ್ನು ವಿನೂತನ ಶೈಲಿಯಲ್ಲಿ ವೀಕ್ಷಿಸಿದ ಡಿಸಿಎಂ DK Sivakumar

ಬೆಂಗಳೂರು: ಹೆಬ್ಬಾಳದಲ್ಲಿ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿರುವುದು ಬೆಂಗಳೂರಿನ ನಿವಾಸಿಗಳಿಗೆಲ್ಲ ಗೊತ್ತಿರುವ ಸಂಗತಿ. ಆದರೆ ಕಾಮಗಾರಿ ವೀಕ್ಷಿಸುವುದು ಇದ್ಯಾವ ವಿಧಾನ ಮಾರಾಯ್ರೇ? ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇವತ್ತು ಹೆಬ್ಬಾಳ ಮೇಲ್ಸೇತುವೆ ಕಾಮಗಾರಿಯನ್ನು…

ಸಾರಿಗೆ ನೌಕರರ ಮುಷ್ಕರದ ಪರಿಣಾಮ: ಮೆಟ್ರೋ ನಿಲ್ದಾಣಗಳಲ್ಲಿ ಜನಜಂಗುಳಿ.

ಬೆಂಗಳೂರು: ಕರ್ನಾಟಕದ ಸಾರಿಗೆ ನಿಗಮಗಳ ನೌಕರರು ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿರುವುದರಿಂದ ಬೆಂಗಳೂರಿನಲ್ಲಿ ಬಸ್ ಸಂಚಾರ ಭಾಗಶಃ ಸ್ಥಗಿತಗೊಂಡಿದೆ. ಸಾರ್ವಜನಿಕ ಸಂಚಾರಕ್ಕೂ ಅಡ್ಡಿಯಾಗಿದೆ. ಪರಿಣಾಮವಾಗಿ ಬೆಂಗಳೂರಿನ ಹಲವಾರು ಮೆಟ್ರೋ…

ಬಸ್ ಬಂದ್ ಎಫೆಕ್ಟ್ : ಮೆಟ್ರೋ ನಿಲ್ದಾಣದ ಮುಂದೆ ಪ್ರಯಾಣಿಕರ ಸಾಲು | KSRTC Strike Impact

ಬೆಂಗಳೂರು : ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು ಸಾರಿಗೆ ನೌಕರರು ಬಸ್ಗಳನ್ನು ರಸ್ತೆಗಿಳಿಸಿಲ್ಲ. ಸಾರಿಗೆ ನೌಕರರ ಮುಷ್ಕರದ ಎಫೆಕ್ಟ್ ಇದೀಗ ನಮ್ಮ ಮೆಟ್ರೋ ಪ್ರಯಾಣಿಕರ…

ಇರುವ ಕ್ಯಾಂಟೀನ್ ನಿರ್ವಹಣೆ ಬಿಟ್ಟು 20 ಕೋಟಿ ರೂ. ವೆಚ್ಚದಲ್ಲಿ ಹೊಸ ಇಂದಿರಾ ಕ್ಯಾಂಟೀನ್​ಗಳ ಆರಂಭಿಸಲು ಮುಂದಾದ BBMP.

ಬೆಂಗಳೂರು : ಬಡಜನರ ಅಕ್ಷಯ ಪಾತ್ರೆಯಂತಿದ್ದ ಇಂದಿರಾ ಕ್ಯಾಂಟೀನ್​ಗಳನ್ನು ಸರಿಯಾಗಿ ನಿರ್ವಹಣೆ ಮಾಡದೇ ಸರ್ಕಾರ ಹಾಗೂ ಪಾಲಿಕೆ ಜನರ ಕೋಪಕ್ಕೆ ಗುರಿಯಾಗಿತ್ತು. ಇತ್ತ ರಾಜಧಾನಿ ಬೆಂಗಳೂರಿನ ಹಲವೆಡೆ ಇಂದಿರಾ ಕ್ಯಾಂಟೀನ್​ಗಳ ಬಿಲ್ ಬಾಕಿ…

ಸಾರಿಗೆ ಮುಷ್ಕರ: ಹಲವೆಡೆ ರಸ್ತೆಗಿಳಿಯದ KSRTC, BMTC ಬಸ್ಗಳು

ಬೆಂಗಳೂರು: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಸಾರಿಗೆ ನೌಕರರು ಮುಷ್ಕರ ಆರಂಭಿಸಿದ್ದಾರೆ. ಇದರಿಂದಗಿ ಸಾರ್ವಜನಿಕರಿಗೆ ಆತಂಕ ಶುರುವಾಗಿದೆ. ಬಿಎಂಟಿಸಿ, ಕೆಎಸ್ಆರ್ಟಿಸಿ ಬಸ್ಗಳನ್ನೇ ಅವಲಂಬಿಸಿರುವ ಜನರು ಕೆಲಸಗಳಿಗೆ, ಶಾಲೆಗಳಿಗೆ…

ಬಸ್ ಇಲ್ಲದ ಬಿಸಿ ಜನರ ಜೇಬಿಗೆ ಹೊಡೆತ : ದಿಢೀರ್ ಆಟೋ ದರ ಏರಿಕೆ || KSRTC Strike Impact

ಇಂದಿನಿಂದ ಸಾರಿಗೆ ನೌಕರರು ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಹೈಕೋರ್ಟ್​​ ಒಂದು ದಿನದ ತಡೆಯಾಜ್ಞೆ ನಡುವೆಯೂ ಬಸ್​​ಗಳ ಸಂಚಾರದಲ್ಲಿ ಕೆಲ ಗೊಂದಲ ಇದ್ದು, ಸಂಪೂರ್ಣ ಬಸ್​ಗಳು ರಸ್ತೆಗಿಳಿದಿಲ್ಲ.  ಹೀಗಾಗಿ ಇದನ್ನೇ ಬಂಡವಾಳ ಮಾಡಿಕೊಂಡ ಕೆಲವು ಆಟೋ ಚಾಲಕರು ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ದಿಢೀರ್​ ಆಟೋ ದರ ಏರಿಕೆ ಮಾಡಿ, ಒಬ್ಬ ಪ್ರಯಾಣಿಕನಿದ್ದರೂ ಕೂಡ 300 ರೂ, 400 ರೂಗಳನ್ನು ವಸೂಲಿ ಮಾಡುತ್ತಿದ್ದಾರೆ. ಶಾಂತಿನಗರದಿಂದ ಜೀವನ್ ಭೀಮಾನಗರಕ್ಕೆ ತೆರಳಲು ಆಟೋ ಚಾಲಕರೊಬ್ಬರು ಒಬ್ಬ ಸಿಂಗಲ್ ಪ್ರಯಾಣಿಕನಿಂದ 350 ರೂಪಾಯಿಗಳನ್ನು ಡಿಮಾಂಡ್ ಮಾಡಿದ ಘಟನೆಯೊಂದು ಈ ಸಮಸ್ಯೆಯ ತೀವ್ರತೆಯನ್ನು ಎತ್ತಿ ತೋರಿಸಿದೆ. ಕೊನೆಗೆ, ಚರ್ಚೆಯ ಬಳಿಕ 250 ರೂಪಾಯಿಗಳಿಗೆ ಒಪ್ಪಿಕೊಂಡ ಚಾಲಕ, ಪ್ರಯಾಣಿಕನನ್ನು ಕರೆದೊಯ್ದಿದ್ದಾರೆ. ಇಲ್ಲಿ ಪ್ರಯಾಣಿಕ ತಮಿಳುನಾಡಿನಿಂದ ಬೆಂಗಳೂರಿಗೆ ಆಗಮಿಸಿದ್ದವರಾಗಿದ್ದು, ಸಾರಿಗೆ ಬಸ್‌ಗಳ ಸೇವೆ ಇಲ್ಲದಿರುವುದರಿಂದ ಆಟೋವನ್ನೇ ಆಶ್ರಯಿಸಬೇಕಾಗಿದೆ. ಆಟೋ ಚಾಲಕನು ದರ ಕೇಳಿದಾಗ ಪ್ರಯಾಣಿಕನಿಗೆ ಶಾಕ್​ ಆಗಿದ್ದು, ಕೊನೆಗೆ 250 ರೂಪಾಯಿಗಳನ್ನು ಪಾವತಿಸಿ ಪ್ರಯಾಣಿಸಿದ್ದಾರೆ. ಸಾಮಾನ್ಯವಾಗಿ, ಶಾಂತಿನಗರದಿಂದ ಜೀವನ್ ಭೀಮಾನಗರಕ್ಕೆ ಆಟೋ ದರ ಸುಮಾರು 100-150 ರೂಪಾಯಿಗಳಷ್ಟಿರುತ್ತದೆ. ಆದರೆ, ಮುಷ್ಕರದಿಂದಾಗಿ ಬಸ್‌ಗಳ ಸಂಚಾರ ಸ್ಥಗಿತಗೊಂಡಿರುವುದರಿಂದ ಆಟೋ ಚಾಲಕರು ಈ ಸಂದರ್ಭವನ್ನು ದುರ್ಬಳಕೆ ಮಾಡಿಕೊಂಡು ದರವನ್ನು ಗಗನಕ್ಕೇರಿಸಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ ಟಿಸಿ) ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಸೇರಿದಂತೆ ರಾಜ್ಯದ ಸಾರಿಗೆ ಘಟಕಗಳ ಸಿಬ್ಬಂದಿ, 38 ತಿಂಗಳ ವೇತನ ಬಾಕಿ, ವೇತನ ಪರಿಷ್ಕರಣೆ, ಮತ್ತು 2021ರ ಮುಷ್ಕರದ ಸಂದರ್ಭದಲ್ಲಿ ವಜಾಗೊಂಡ ನೌಕರರ ಮರುನೇಮಕಾತಿಗಾಗಿ ಈ ಹೋರಾಟಕ್ಕೆ ಕರೆ ನೀಡಿದ್ದಾರೆ. ಇದರಿಂದ ಬೆಂಗಳೂರಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಮೇಲೆ ಭಾರೀ ಒತ್ತಡ ಉಂಟಾಗಿದ್ದು, ವಿಶೇಷವಾಗಿ ಶಕ್ತಿ ಯೋಜನೆಯಡಿ ಉಚಿತ ಬಸ್ ಪ್ರಯಾಣದ ಸೌಲಭ್ಯವನ್ನು ಪಡೆಯುವ ಮಹಿಳೆಯರಿಗೆ ತೊಂದರೆಯಾಗಿದೆ.

ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : CM

ಬೆಂಗಳೂರು : ವೇತನ ಹೆಚ್ಚಳ ಹಿಂಬಾಕಿ, ವೇತನ ಪರಿಷ್ಕರಣೆ ಸಂಬಂಧ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ನೌಕರ ಸಂಘಟನೆಗಳು ಮತ್ತು ಸರ್ಕಾರದ ನಡುವೆ ಸೋಮವಾರ ನಡೆದ…

KSRTC Protest: ಬಸ್ ಇಲ್ಲ, ಶಾಲೆ-ಕಚೇರಿ ಹೋಗೋ ಜನ ಕಂಗಾಲು | Travel Crisis Across Karnataka

ಬೆಂಗಳೂರು : ವೇತನ ಪರಿಷ್ಕರಣೆ ಹಾಗೂ 20 ತಿಂಗಳ ಹಿಂಬಾಕಿ ವೇತನ ಬಿಡುಗಡೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಎಂಟಿಸಿ, ಕೆಎಸ್​ಆರ್​ಟಿಸಿ (KSRTC) ಸೇರಿದಂತೆ 4…

KSRTC, BMTC ಮುಷ್ಕರ ನಿಲ್ಲಿಸಲು ತೀವ್ರ ಪ್ರಯತ್ನ – ನಾಳೆ ಬಸ್ ಸಂಚಾರ ಇರುತ್ತಾ..?

ಬೆಂಗಳೂರು: ಸಾರಿಗೆ ಮುಷ್ಕರ ನಿಲ್ಲಿಸಲು ಕೆಎಸ್‌ಆರ್‌ಟಿಸಿ ಈಗ ಕೊನೆಯ ಕಸರತ್ತು ಆರಂಭಿಸಿದೆ. ಕೆಎಸ್‌ಆರ್‌ಟಿಸಿಯ ವ್ಯವಸ್ಥಾಪಕ ನಿರ್ದೇಶಕರಾದ ಅಕ್ರಂ‌ ಪಾಷಾ ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ…