Chandraprabha: ಭೀಕರ ಹಿಟ್ ಅಂಡ್ ರನ್ ಕೇಸ್ ನಲ್ಲಿ ಹಾಸ್ಯ ನಟ..!!

ಚಿಕ್ಕಮಗಳೂರು: ‘ಗಿಚ್ಚಿ ಗಿಲಿ ಗಿಲಿ’ ವಿನ್ನರ್ ಚಂದ್ರಪ್ರಭಾ ಅವರು ಹಿಟ್ & ರನ್ ಕೇಸ್ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಅಪಘಾತ ಮಾಡಿ ಮಾನವೀಯತೆಗೂ ಕಾರು ನಿಲ್ಲಿಸದೇ ನಟ ಪರಾರಿಯಾಗಿದ್ದಾರೆ. ಸೋಮವಾರ ರಾತ್ರಿ (ಸೆ.4)  ಚಿಕ್ಕಮಗಳೂರಿನಲ್ಲಿ ಈ ಅಪಘಾತ ನಡೆದಿದ್ದು, ಬೈಕ್‌ನಲ್ಲಿದ್ದ ಯುವಕ ಮಾಲ್ತೇಶ್‌ಗೆ ಗುದ್ದಿ ಚಂದ್ರಪ್ರಭಾ ಎಸ್ಕೇಪ್ ಆಗಿದ್ದಾರೆ.

ಕೇಸ್

ಚಿಕ್ಕಮಗಳೂರು ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದೆ. ಚಿಕ್ಕಮಗಳೂರು ಸಮೀಪದ ನಾಗೇನಹಳ್ಳಿ ನಿವಾಸಿ ಮಾಲ್ತೇಶ್ ಎಂಬುವವರು ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರು ಕೆಲಸ ಮುಗಿಸಿ ಬೈಕ್‌ನಲ್ಲಿ ಬರುತ್ತಿದ್ದರು. ಈ ವೇಳೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ.

ಮಾಲ್ತೇಶ್‌ಗೆ ಏನಾಯಿತು ಎಂದು ನೋಡುವ ಸೌಜನ್ಯ ಕೂಡ ತೋರಿಲ್ಲ. ಈ ಕಾರು ಚಂದ್ರಪ್ರಭಾ ಅವರಿಗೆ ಸೇರಿದ್ದಾಗಿದೆ. ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.  ಸದ್ಯ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಮಾಲ್ತೇಶ್‌ಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿ ಗಂಭೀರ ಆಗಿದೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook: https://www.facebook.com/PragathiTV/

Pragati TV Social Connect for more latest u

Leave a Reply

Your email address will not be published. Required fields are marked *