ಚಿಕ್ಕಬಳ್ಳಾಪುರ || ರೈತನ ಮೇಲೆ ಗುಂಡು ಹಾರಿಸಿದ ಗಣಿ ಮಾಲೀಕ ಅರೆಸ್ಟ್

ಚಿಕ್ಕಬಳ್ಳಾಪುರ || ರೈತನ ಮೇಲೆ ಗುಂಡು ಹಾರಿಸಿದ ಗಣಿ ಮಾಲೀಕ ಅರೆಸ್ಟ್

ಚಿಕ್ಕಬಳ್ಳಾಪುರ : ರಸ್ತೆ ನಿರ್ಮಾಣ ಮಾಡುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ, ಗಣಿ ಮಾಲೀಕ ಸಕಲೇಶ್ ರೈತ ರವಿ ಮೇಲೆ ಗುಂಡು ಹಾರಿಸಿದ, ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಚೇನಹಳ್ಳಿ ಪೊಲೀಸರು ಆರೋಪಿ ಸಕಲೇಶ್ ಅವರನ್ನು ಬಂಧಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆ ಮಂಚೇನಹಳ್ಳಿ ತಾಲೂಕಿನ ಬಂಡಿರಾಮನಹಳ್ಳಿ, ಕನಗಾನಕೊಪ್ಪ, ರಾಯನಕಲ್ಲು ಗ್ರಾಮಗಳ ಸಮೀಪದ ಬೆಟ್ಟಗುಡ್ಡಗಳಲ್ಲಿ ಕಲ್ಲು ಗಣಿಗಾರಿಕೆ, ಗಣಿಗಾರಿಕೆ ಲಾರಿಗಳ ಓಡಾಟಕ್ಕೆ ದಾರಿ ಮಾಡಲು ಗಣಿ ಮಾಲೀಕ ಸಕಲೇಶ್ ಜೆಸಿಬಿಗಳ ಮೂಲಕ ರಸ್ತೆ ನಿರ್ಮಾಣ ಮಾಡುತ್ತಿದ್ದರು. ಗಣಿಗಾರಿಕೆಗೆ ಸುತ್ತಮುತ್ತಲಿನ ಗ್ರಾಮಸ್ಥರ ವಿರೋಧ ಇತ್ತು, ಇದೇ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ ಎಂದು ವರದಿಯಾಗಿದೆ.

ಬುಧವಾರ ಮಧ್ಯಾಹ್ನ 1:30ರ ಸಮಯದಲ್ಲಿ ರೈತರು ರಸ್ತೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದೆ. ಪ್ರತಿಭಟನೆಗೆ ಮುಂದಾದರು, ಈ ವೇಳೆ ಗಣಿ ಮಾಲೀಕ ಗಣಿ ಮಾಲೀಕ ಗನ್ ನಿಂದ ರವಿ ಎಂಬುವರ ಮೇಲೆ ಗುಂಡು ಹಾರಿಸಿದ, ರೈತ ರವಿ ತೊಡೆಗೆ ಗುಂಡು ತಗುಲಿ ಸ್ಥಳದಲ್ಲೇ ಬಿದ್ದಿದ್ದರು. ಗಾಯಾಳು ರವಿಗೆ ಚಿಕಿತ್ಸೆ ನೀಡಲಾಗಿದ್ದು, ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಗಣಿ ಮಾಲೀಕ ಸಕಲೇಶ್ ಅವರನ್ನು ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳುವಂತೆ ರೈತ ಸಂಘಟನೆಯ ಕಾರ್ಯಕರ್ತರು ಮಂಚನೇಹಳ್ಳಿ ಪೊಲೀಸ್ ಠಾಣೆ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದರು. ಘಟನೆಯಾದ ದಿನದೊಳಗೆ ಆರೋಪಿ ಸಕಲೇಶ್ ನನ್ನ ಪೊಲೀಸರು ಬಂಧಿಸಿದ್ದು, ಕಾನೂನು ಕ್ರಮ ತೆಗೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *