ಜಗಮಗಿಸುವ ಮೈಸೂರು ದಸರಾ ದೀಪಾಲಂಕಾರಕ್ಕೆ ಮನಸೋತ ಸಿಎಂ

ಜಗಮಗಿಸುವ ಮೈಸೂರು ದಸರಾ ದೀಪಾಲಂಕಾರಕ್ಕೆ ಮನಸೋತ ಸಿಎಂ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದ ಕೊನೆಯ ದಿನ ಸಿಎಂ ಸಿದ್ದರಾಮಯ್ಯ ನಗರದ ಆಯ್ದ ಭಾಗಗಳ ದೀಪಾಲಂಕಾರ ವೀಕ್ಷಿಸಿದ್ದು, ಅದ್ಭುತ ದೃಶ್ಯಗಳಿಗೆ ಮನಸೋತರು.

ಅಂಬಾರಿ ಬಸ್ ಮೂಲಕ ಸಿಟಿ ರೌಂಡ್ಸ್ ಹೊರಟ ಸಿಎಂ ಜೊತೆಗೆ ಇಂಧನ ಸಚಿವ ಕೆ.ಜೆ.ಜಾರ್ಜ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಚಾಮುಂಡೇಶ್ವರಿ ವಿದ್ಯುತ್ ನಿಗಮ ನಿಯಮಿತದ ಅಧ್ಯಕ್ಷ ಎ.ಬಿ.ರಮೇಶ್ ಬಂಡಿಸಿದ್ದೇಗೌಡ, ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಗಣೇಶ್ ಪ್ರಸಾದ್, ಮುಡಾ ಅಧ್ಯಕ್ಷ ಮರಿಗೌಡ ಸೇರಿದಂತೆ ಇನ್ನಿತರ ಅಧಿಕಾರಿಗಳಿದ್ದರು.

ಈ ಸಂದರ್ಭದಲ್ಲಿ ಅಂಬಾರಿ ಬಸ್ನಲ್ಲಿಯೇ ಕುಳಿತು ಬನ್ನಿಮಂಟಪದಲ್ಲಿ ನಡೆಯುತ್ತಿರುವ ಡ್ರೋನ್ ಶೋ ವೀಕ್ಷಿಸಿದ ಸಿಎಂ ಸಂತಸ ವ್ಯಕ್ತಪಡಿಸಿದರು.

ದೀಪಾಲಂಕಾರ ನೋಡಲು ತಮ್ಮ ಜೊತೆ ಆಗಮಿಸಿದ್ದ ಸಚಿವರಿಗೆ ಅರಮನೆ ಹಾಗೂ ಮಾರ್ಗಮಧ್ಯೆ ಬರುವ ಸ್ಥಳಗಳ ಹಿನ್ನೆಲೆ ಹಾಗೂ ಮಹತ್ವವನ್ನು ಸಿಎಂ ತಿಳಿಸಿದರು.

Leave a Reply

Your email address will not be published. Required fields are marked *