ಕಾಂಗ್ರೆಸ್ ನಲ್ಲೂ ‘ಕಿಂಡರ್ ಗಾರ್ಡನ್’ ಪದ್ಧತಿ ಇದೆ : ಸಚಿವ ಸ್ಥಾನದ ಕುರಿತು ಶಾಸಕ ನರೇಂದ್ರ ಸ್ವಾಮಿ ಅಸಮಾಧಾನ

ಕಾಂಗ್ರೆಸ್ ನಲ್ಲೂ 'ಕಿಂಡರ್ ಗಾರ್ಡನ್' ಪದ್ಧತಿ ಇದೆ : ಸಚಿವ ಸ್ಥಾನದ ಕುರಿತು ಶಾಸಕ ನರೇಂದ್ರ ಸ್ವಾಮಿ ಅಸಮಾಧಾನ

ಮಂಡ್ಯ : ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನದ ವಾರ್ ಮತ್ತೆ ಭುಗಿಲೆದ್ದಿದೆ. ಸಚಿವ ಸ್ಥಾನ ಸಿಗದಿದ್ದಕ್ಕೆ ಮಂಡ್ಯ ಜಿಲ್ಲೆಯ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಕಾಂಗ್ರೆಸ್ ನಲ್ಲೂ ಕಿಂಡರ್ ಗಾರ್ಡನ್ ಪದ್ಧತಿ ಇದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನಗೆ ಸಚಿವ ಸ್ಥಾನ ಬೇಡಿಕೆ ಇಲ್ಲ.

ಅದು ನನ್ನ ಹಕ್ಕು ಎಂದು ಮಂಡ್ಯದಲ್ಲಿ ಮಳವಳ್ಳಿಯ ಕಾಂಗ್ರೆಸ್ ಶಾಸಕ ನರೇಂದ್ರ ಸ್ವಾಮಿ ಹೇಳಿಕೆ ನೀಡಿದ್ದಾರೆ. ಸಂಪುಟ ಪುನಾರಚನೆಯ ವೇಳೆ ಸಚಿವ ಸ್ಥಾನ ಪಡೆಯುವ ವಿಶ್ವಾಸವಿದೆ. ಕಾಂಗ್ರೆಸ್ ಪಕ್ಷದಲ್ಲೂ ಕಿಂಡರ್ ಗಾರ್ಡನ್ ಪದ್ಧತಿ ಇದೆ.

ರಾಜಕೀಯ ಹಿನ್ನೆಲೆ ಇದ್ದರೆ ಮಾತ್ರ ಸ್ನಾನ ಮಾನ ಸಿಗುತ್ತದೆ. ನನಗೆ ಯಾವುದೇ ರಾಜಕೀಯ ಹಿನ್ನೆಲೆ ಇಲ್ಲ. ಹಾಗಾಗಿ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಮಂಡ್ಯದಲ್ಲಿ ಮಳವಳ್ಳಿಯ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಅಸಮಾಧಾನ ಹೊರಹಾಕಿದರು.

Leave a Reply

Your email address will not be published. Required fields are marked *