ರಾಹುಲ್ ಗಾಂಧಿ ಕೆನ್ನೆಗೆ ಹೊಡೆಯಬೇಕೆಂಬ ಬಿಜೆಪಿ ಶಾಸಕನ ಹೇಳಿಕೆಗೆ ಕಾಂಗ್ರೆಸ್​ ಖಂಡನೆ

ಮಂಗಳೂರು: ಸಂಸತ್ತಿನಲ್ಲಿ ಹಿಂದೂ ವಿರೋಧಿ ಭಾಷಣ ಮಾಡಿದ್ದಾರೆ ಎಂದು ಆಪಾದಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿ, ರಾಹುಲ್ ಗಾಂಧಿ ಕೆನ್ನೆಗೆ ಹೊಡೆಯಬೇಕು ಎಂದು ನೀಡಿರುವ ಹೇಳಿಕೆಗೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಶಾಸಕ ಭರತ್ ಶೆಟ್ಟಿ ವಿರುದ್ದ ಸುಮೋಟೋ ಪ್ರಕರಣ ದಾಖಲಿಸುವಂತೆ ಆಗ್ರಹಿಸಿದೆ.

ಮಂಗಳೂರಿನ ಕಾವೂರಿನಲ್ಲಿ ಭಾನುವಾರ ನಡೆದ ಪ್ರತಿಭಟನೆಯಲ್ಲಿ ಶಾಸಕ ಡಾ.ವೈ.ಭರತ್ ಶೆಟ್ಟಿ ರಾಹುಲ್ ಗಾಂಧಿ ಹೇಳಿಕೆಯನ್ನು ಟೀಕಿಸುವ ವೇಳೆ, ರಾಹುಲ್ ಗಾಂಧಿಗೆ ಸಂಸತ್ತಿಗೆ ಹೋಗಿ ಕಪಾಳಕ್ಕೆ ಬಾರಿಸಬೇಕು ಎಂದು ಹೇಳಿದ್ದರು.

ಈ ಹೇಳಿಕೆ ಇದೀಗ ಕರಾವಳಿಯಲ್ಲಿ ಚರ್ಚೆಗೆ ಕಾರಣವಾಗಿದೆ. ಶಾಸಕ ಭರತ್ ಶೆಟ್ಟಿ ಅವರ ಹೇಳಿಕೆಯ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ರಮಾನಾಥ ರೈ, ಶಾಸಕ ಭರತ್ ಶೆಟ್ಟಿ ವಿರುದ್ಧ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು

Leave a Reply

Your email address will not be published. Required fields are marked *