ದಾಬಸ್ಪೇಟೆ : ಬೈಕ್ ಗೆ ಕಂಟೈನರ್ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ48ರ ತುಮಕೂರು-ಬೆಂಗಳೂರು ರಸ್ತೆಯ ಟಿ.ಬೇಗೂರು ಸಮೀಪದ ಸಿದ್ದಾರ್ಥ ಆಸ್ಪತ್ರೆ ಬಳಿ ನಡೆದಿದೆ.
ತ್ಯಾಮಗೊಂಡ್ಲು ಹೋಬಳಿಯ ಮಹಿಮಾಪುರ ಗ್ರಾಮದ ನಿವಾಸಿ ವೆಂಕಟೇಶ್ (30) ಮೃತಪಟ್ಟ ದುರ್ದೈವಿಯಾಗಿದ್ದು, ಈತ ಶುಕ್ರವಾರ ಮಧ್ಯಾಹ್ನ ನೆಲಮಂಗಲದಿAದ ಸ್ವಗ್ರಾಮ ಮಹಿಮಾಪುರಕ್ಕೆ ತನ್ನ ಬೈಕ್ ನಲ್ಲಿ ಬರುವಾಗ ಕಂಟೈನರ್ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.