ಸ್ಪೀಕರ್ UT ಖಾದರ್ ವಿರುದ್ಧ ಭ್ರಷ್ಟಾಚಾರ ಆರೋಪ – BJP ಶಾಸಕ ಭರತ್ ಶೆಟ್ಟಿ ಗಂಭೀರ ಆರೋಪ!

ಸ್ಪೀಕರ್ UT ಖಾದರ್ ವಿರುದ್ಧ ಭ್ರಷ್ಟಾಚಾರ ಆರೋಪ – BJP ಶಾಸಕ ಭರತ್ ಶೆಟ್ಟಿ ಗಂಭೀರ ಆರೋಪ!

ಮಂಗಳೂರು : ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ವಿರುದ್ಧವೇ ಈಗ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ಸ್ಪೀಕರ್‌ ಹುದ್ದೆಯ ಮೇಲೆ ಭ್ರಷ್ಟಾಚಾರದ ಅನುಮಾನ ಮೂಡಿದೆ. ಸ್ಪೀಕರ್ ಕಚೇರಿಯನ್ನು ಆರ್‌ಟಿಐ ವ್ಯಾಪ್ತಿಗೆ ತರಬೇಕು. ನಮಗೆ ಪ್ರಶ್ನೆ ಕೇಳಲು ಅವಕಾಶವಿಲ್ಲ. ಸಿಟ್ಟಿಂಗ್ ಜಡ್ಜ್ ಮೂಲಕ ಈ ಹಗರಣದ ತನಿಖೆ ಆಗಬೇಕು ಎಂದು ಮಂಗಳೂರಿನಲ್ಲಿ ಬಿಜೆಪಿ ಶಾಸಕ ಡಾ. ವೈ. ಭರತ್ ಶೆಟ್ಟಿ ಆಗ್ರಹಿಸಿದ್ದಾರೆ. ‘ಟಿವಿ9’ ಜತೆ ಮಾತನಾಡಿದ ಅವರು, ವಿಧಾನಸಭಾ ಲಾಂಜ್ ಅನ್ನು ಮಸಾಜ್ ಪಾರ್ಲರ್ ರೀತಿಯಲ್ಲಿ ಮಾಡಿದ್ದಾರೆ. ಎಲ್ಲರಿಗೂ ಉಚಿತ ಆಹಾರ ಎಂದು ಹೇಳುತ್ತಾರೆ, ಆದರೆ ಅದರ ಲೆಕ್ಕಾಚಾರ ಎಲ್ಲಿದೆ ಎಂಬುದು ಯಾರಿಗೂ ಗೊತ್ತಿಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಎಲ್‌ಎಚ್ ವರಾಂಡದೊಳಗೆ ನಾಯಿ ತಿರುಗುತ್ತವೆ, ಆದರೆ ಸ್ಪೀಕರ್ ಸ್ಮಾರ್ಟ್ ಲಾಕ್ ಹಾಕಲು ಹೊರಟಿದ್ದಾರೆ. ಯು.ಟಿ. ಖಾದರ್ ಅವರಿಗೆ ‘ಸರ್ವಜ್ಞ ಸಿಂಡ್ರೋಮ್’ ಇದೆ. ಆರ್ಥಿಕ ಶಿಸ್ತು ಇಲ್ಲದೆ ಸರ್ಕಾರ ಮುಳುಗಿದೆ ಎಂದು ಭರತ್ ಶೆಟ್ಟಿ ಕಿಡಿಕಾರಿದ್ದಾರೆ.

ಸ್ಪೀಕರ್ ಹುದ್ದೆಯನ್ನು ಲಾಭದಾಯಕ ಹುದ್ದೆಯನ್ನಾಗಿ ತೋರಿಸಿರುವವರು ಯುಟಿ ಖಾದರ್. ಶಾಸಕರಿಗೆ ಕೊಠಡಿಗಳನ್ನು ಕೊಡುತ್ತಾರೆ. ಆದರೆ ಪ್ಯಾಡ್ ಲಾಕ್ ಹಾಗೂ ಸ್ಮಾರ್ಟ್ ಲಾಕ್ ಹಾಕಿದ್ದಾರೆ. ಇದು ಸ್ಪೀಕರ್ ಆದೇಶದಿಂದ ಆಗಿದೆ ಎಂದು ಹೇಳಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ವಿಧಾನಸೌದಕ್ಕೆ ಉಪಕರಣಗಳ ಖರೀದಿಯಲ್ಲಿ ಅಕ್ರಮ?

ಸ್ಮಾರ್ಟ್ ಸೇಫ್ ಲಾಕರ್ಸ್, ಸ್ಮಾರ್ಟ್ ಎನರ್ಜಿ ಸೊಲ್ಯೂಷನ್, ಸ್ಟೈನ್ ಲೆಸ್ ಸ್ಟೀಲ್ ವಾಟರ್ ಪ್ಯೂರಿಫೈಯರ್ ಇವುಗಳ ಖರೀದಿಯಲ್ಲಿ ಬೆಲೆ ವ್ಯತ್ಯಾಸ ಇದೆ. ಇವುಗಳನ್ನು ಮಂಗಳೂರು ಮೂಲದವರು ಪೂರೈಕೆ ಮಾಡಿದ್ದಾರೆ ಎಂಬ ಮಾಹಿತಿ ಇದೆ ಎಂದು ಅವರು ಹೇಳಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *