ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ದಿಂಬು ಮತ್ತು ಹಾಸಿಗೆಗಾಗಿ ಅರ್ಜಿ ಸಲ್ಲಿಕೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ದಿಂಬು ಮತ್ತು ಹಾಸಿಗೆಗಾಗಿ ಅರ್ಜಿ ಸಲ್ಲಿಕೆ.

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್​​ನಲ್ಲಿ ದರ್ಶನ್  ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳ ಜಾಮೀನು ರದ್ದಾಗಿದೆ. ಹೀಗಾಗಿ, ಈ ಏಳೂ ಮಂದಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಹೀಗಿರುವಾಗಲೇ ಪವಿತ್ರಾ ಗೌಡ ಅವರು ಕೆಳ ಹಂತದ ಕೋರ್ಟ್​ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ದರ್ಶನ್ ಅವರು ದಿಂಬು-ಹಾಸಿಗಾಗಿ ಬೇಡಿಕೆ ಇಟ್ಟಿದ್ದಾರೆ. ಸದ್ಯ ಇಬ್ಬರ ಅರ್ಜಿ ವಿಚಾರಣೆಯ ತೀರ್ಪು ಸೆಪ್ಟೆಂಬರ್ 2ಕ್ಕೆ ಹೊರ ಬೀಳಲಿದೆ.

ದರ್ಶನ್ ಅರ್ಜಿಯಲ್ಲೇನಿದೆ?

ದರ್ಶನ್ ಅವರಿಗೆ ವಿಶೇಷ ಸವಲತ್ತು ನೀಡದಂತೆ ಸುಪ್ರೀಂ ಕೋರ್ಟ್ ಖಡಕ್ ಸೂಚನೆ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಾಕಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಅವರಿಗೆ ನಿಯಮದಲ್ಲಿರುವಂತೆ ಒಂದು ಬೆಡ್​ಶೀಟ್ ಮಾತ್ರ ನೀಡಲಾಗಿದೆ ಎನ್ನಲಾಗಿದೆ. ಹೆಚ್ಚುವರಿಯಾಗಿ ಯಾವುದೇ ಬೆಡ್​ಶೀಟ್ ಕೊಟ್ಟಿಲ್ಲ. ಈ ವಿಚಾರಕ್ಕೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಕೆ ಆಗಿದೆ.

‘ನಾವು ದರ್ಶನ್​ಗೆ ಮನೆ ಊಟ ಕೇಳುತ್ತಿಲ್ಲ. 5 ಸ್ಟಾರ್ ಅನುಕೂಲ ಕೂಡ ಬೇಕು ಎಂದು ಹೇಳುತ್ತಿಲ್ಲ. ದರ್ಶನ್​ಗೆ ಬೆಡ್​ಶಿಟ್, ದಿಂಬು ಕೊಡುತ್ತಿಲ್ಲ. ಕೋರ್ಟ್​ನಿಂದ ನಿರ್ದೇಶನ ತನ್ನಿ ಎಂದಿದ್ದಾರೆ’ ಎಂದು ದರ್ಶನ್ ಪರ ವಕೀಲ್ ಸುನೀಲ್‌ಕುಮಾರ್ ಸೆಶನ್ ಕೋರ್ಟ್​ನಲ್ಲಿ ವಾದ ಮಾಡಿದ್ದಾರೆ.  ಈ ಅರ್ಜಿ ವಿಚಾರಣೆ ಮುಂದಕ್ಕೆ ಹಾಕಲಾಗಿದೆ. ಇನ್ನು, ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವಂತೆ ಅರ್ಜಿ ಸಲ್ಲಿಕೆ ಆಗಿತ್ತ. ಇದರ ವಿಚಾರಣೆ ಸೆ.2ಕ್ಕೆ ಮುಂದೂಡಿಕೆ ಆಗಿದೆ.

ಪವಿತ್ರಾ ಜಾಮೀನು ಅರ್ಜಿ

ಸುಪ್ರೀಂಕೋರ್ಟ್​ನಲ್ಲಿ ಪವಿತ್ರಾ ಗೌಡ ಜಾಮೀನು ರದ್ದಾಗಿದೆ. ಈ ಬೆನ್ನಲ್ಲೇ ಅವರು ಕೆಳ ಹಂತದ ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಈ ವೇಳೆ ಪವಿತ್ರಾ ಪರ ವಕೀಲರು ವಾದ ಮಂಡಿಸಿದರು. ‘ಸುಪ್ರೀಂಕೋರ್ಟ್ ಆದೇಶವನ್ನು ನಾವು ಪ್ರಶ್ನಿಸುತ್ತಿಲ್ಲ. ಆದೇಶದಲ್ಲಿ ತಾಂತ್ರಿಕ ಲೋಪವಿರುವುದರಿಂದ ಜಾಮೀನು ನೀಡಬೇಕು’ ಎಂದು ಬಾಲನ್ ವಾದಿಸಿದ್ದಾರೆ. ಇದಕ್ಕೆ ಪ್ರತಿವಾದಿ ಸಚಿನ್ ಆಕ್ಷೇಪ ಹೊರಹಾಕಿದ್ದಾರೆ. ಜಾಮೀನು ಅರ್ಜಿ ರದ್ದು ಮಾಡಿ ಎಂದು ಕೋರಿದ್ದಾರೆ. ಸದ್ಯ ಸೆಪ್ಟೆಂಬರ್ 2ಕ್ಕೆ ಆದೇಶ ಮುಂದೂಡಿಕೆ ಆಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *