ನಟ ದರ್ಶನ್ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಇದೇ ಜೈಲಿನಲ್ಲಿ ಕೈದಿಗಳಿಗೆ ವಿಶೇಷ ಸವಲತ್ತು ಸಿಗುತ್ತಿದೆ. ಇದಕ್ಕೆ ಸಂಬಂಧಿಸಿದ ಹೊಸ ವಿಡಿಯೋ ವೈರಲ್ ಆಗಿದೆ. ಈ ಬೆನ್ನಲ್ಲೇ ದರ್ಶನ್ ಆಪ್ತ, ನಟ ನಿನ್ನೆ ನಟ ಧನ್ವೀರ್ನನ್ನು ಕರೆಸಿ ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಸದ್ಯ ಜೈಲಿನ ವಿಡಿಯೋನ ದರ್ಶನ್ ಆಪ್ತ ಧನ್ವೀರ್ ರಿಲೀಸ್ ಮಾಡಿರೋ ಅನುಮಾನ ಇದೆ. ಈ ಕಾರಣದಿಂದಲೇ ಧನ್ವೀರ್ ವಿಚಾರಣೆ ನಡೆಸಲಾಗಿದೆ. ಆದರೆ ಅವರ ಬಳಿ ಆ ರೀತಿಯ ಯಾವುದೇ ವಿಡಿಯೋ ಪತ್ತೆ ಆಗಿಲ್ಲ. ಹಾಗಾಗಿ ವಿಚಾರಣೆ ನಡೆಸಿ ಅವರನ್ನು ಸಿಸಿಬಿ ಪೊಲೀಸರು ಕಳುಹಿಸಿದ್ದಾರೆ.
For More Updates Join our WhatsApp Group :
