ಬೆಂಗಳೂರು : ದೆಹಲಿಯ ಸಂಸದ ಭವನದಲ್ಲಿ ಬರುವ ಏಪ್ರಿಲ್ ೩೦ರಂದು ಜಗಜ್ಯೋತಿ ಬಸವಣ್ಣನವರ ಜಯಂತಿಯನ್ನು ಆಚರಿಸಲಾಗುವುದು ಎಂದು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭೆಯ ಅಧ್ಯಕ್ಷರಾದ ಓಂ ಬಿರ್ಲಾ, ಕೇಂದ್ರ ಸಚಿವರಾದ ಅಶ್ವಿನಿ ವೈಷ್ಣವ್, ಪ್ರಲ್ಹಾದ್ ಜೋಶಿ, ನಿರ್ಮಲಾ ಸೀತಾರಾಮನ್ ಸೇರಿದಂತೆ ಹಲವು ಗಣ್ಯರನ್ನು ಜಯಂತಿ ಸಮಾರಂಭದಲ್ಲಿ ಭಾಗವಹಿಸುವಂತೆ ಆಹ್ವಾನಿಸಲಾಗಿದೆ ಎಂದು ಅವರು ತಿಳಿಸಿದರು.
ಜಗಜ್ಯೋತಿ ಬಸವಣ್ಣನವರ ತತ್ವ ಸಿದ್ಧಾಂತಗಳು ಎಲ್ಲೆಡೆ ಪ್ರಚುರಪಡಿಸಲು ತಾವು ಸತತ ಪ್ರಯತ್ನ ಮಾಡುವ ಭಾಗವಾಗಿ ಸಂಸತ್ತಿನಲ್ಲಿ ಜಯಂತಿ ಆಚರಿಸುವ ಪ್ರಯತ್ನ ಮಾಡಲಾಯಿತು. ಅವರ ವಚನಗಳು ಸದನದಲ್ಲಿ ಲಿಖಿತ ರೂಪದಲ್ಲಿ ಮೂಡಬೇಕು ಮತ್ತು ಪುತ್ಥಳಿ ಅನಾವರಣವಾಗಬೇಕು ಎಂಬ ಹೆಬ್ಬಯಕೆ ತಮ್ಮದಾಗಿದೆ. ಕರ್ನಾಟಕ ರಾಜ್ಯದಲ್ಲಿ ಜಗಜ್ಯೋತಿ ಬಸವಣ್ಣನವರ ಹೆಸರಿನಲ್ಲಿ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕು ಎಂಬ ಬಯಕೆಯೂ ತಮ್ಮದಾಗಿದೆ ಎಂದು ತಿಳಿಸಿದರು.
ರೈಲ್ವೆ ಇಲಾಖೆಗೆ ಸಂಬAಧಿಸಿದAತೆ ಮಾಹಿತಿ ನೀಡಿದ ಅವರು, ಯುಪಿಎ ಸರ್ಕಾರವಿದ್ದಾಗ ರೈಲ್ವೆ ಯೋಜನೆಗಳಿಗೆ ೮೩೩ ಕೋಟಿ ಅನುದಾನವನ್ನು ಕರ್ನಾಟಕಕ್ಕೆ ನೀಡಲಾಗುತ್ತಿತ್ತು. ಈಗಿನ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅನುದಾನವನ್ನು ೫ ಸಾವಿರದ ೫೦೦ ಕೋಟಿ ರೂಪಾಯಿಗೆ ಹೆಚ್ಚಿಸಿದೆ. ನೆನಗುದಿಗೆ ಬಿದ್ದಿದ್ದ ೧೧ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಯಶವಂತಪುರ ರೈಲ್ವೆ ನಿಲ್ದಾಣ ಸೇರಿದಂತೆ ಬೆಂಗಳೂರಿನ ವಿವಿಧ ರೈಲ್ವೆ ನಿಲ್ದಾಣಗಳ ಆಧುನೀಕರಣ ಯೋಜನೆ ಜಾರಿಯಲ್ಲಿದೆ. ವಿಮಾನ ನಿಲ್ದಾಣಕ್ಕೆ ರೈಲ್ವೆ ಸಂಪರ್ಕ, ಸಬರ್ಬನ್ ರೈಲು, ವರ್ತುಲ ರೈಲು ಹೀಗೆ ಬೆಂಗಳೂರಿನಲ್ಲಿ ಹಲವಾರು ರೈಲ್ವೆ ಯೋಜನೆಗಳು ಜಾರಿಯಲ್ಲಿವೆ ಎಂದರು.
ಜಾತಿಗಣತಿ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಭಾವನೆಗಳೊಂದಿಗೆ ಆಟವಾಡುವುದು ತರವಲ್ಲ ಎಂದ ಅವರು, ಜಾತಿಗಣತಿ ವರದಿಯಿಂದ ರಾಜ್ಯ ಅವ್ಯವಸ್ಥೆಯ ಆಗರವಾಗಿದೆ. ಇದನ್ನು ತಿರಸ್ಕರಿವುದು ಉತ್ತಮ ಎಂದರು.