ಇಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ತಿಹಾರ್‌ ಜೈಲಿಗೆ ವಾಪಸ್

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ಬಿಗ್ ರಿಲೀಫ್

ನವದೆಹಲಿ: ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಜಾಮೀನು ಪಡೆದಿದ್ದ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಇಂದು ಮತ್ತೆ ತಿಹಾರ್‌ ಜೈಲಿಗೆ ಹೋಗಲಿದ್ದಾರೆ

ದೆಹಲಿ ಮದ್ಯ ನೀತಿ ಹಗರಣದಲ್ಲಿ ಕೇಜ್ರಿವಾಲ್‌ ಜೈಲು ಪಾಲಾಗಿದ್ದಾರೆ. ಚುನಾವಣೆ ಪ್ರಚಾರ ಕಾರಣಕ್ಕೆ ಮಧ್ಯಂತರ ಜಾಮೀನು ಮೇರೆಗೆ ಹೊರ ಬಂದಿದ್ದರು. ಚುನಾವಣಾ ಪ್ರಚಾರಕ್ಕಾಗಿ ಕೋರ್ಟ್‌ ಜಾಮೀನು ನೀಡಿತ್ತು. ನಿನ್ನೆಗೆ ಜಾಮೀನು ಅವಧಿ ಅಂತ್ಯಗೊಂಡಿದೆ. ಈ ಹಿನ್ನೆಲೆ ಇಂದು ತಿಹಾರ್ ಜೈಲಿಗೆ ದೆಹಲಿ ಸಿಎಂ ಮರಳಲಿದ್ದಾರೆ.

ಜಾಮೀನು ವಿಸ್ತರಣೆ ಕೋರಿ ಸುಪ್ರೀಂ ಕೋರ್ಟ್‌ಗೆ ಕೇಜ್ರಿವಾಲ್‌ ಈಚೆಗೆ ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿತ್ತು

ದೆಹಲಿ ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಆದರೆ ಅರ್ಜಿಯ ವಿಚಾರಣೆ ಜೂನ್ 5 ರಂದು ನಡೆಯಲಿದೆ. ಎಎಪಿ ನಾಯಕ ಶರಣಾಗಲು ಮಧ್ಯಾಹ್ನ 3 ಗಂಟೆಗೆ ಮನೆಯಿಂದ ಹೊರಡುವುದಾಗಿ ತಿಳಿಸಿದ್ದಾರೆ

Leave a Reply

Your email address will not be published. Required fields are marked *