ಅಪ*ತದಲ್ಲಿ ಗಾಯಾಳುಗಳಿಂದ ಮುಂಗಡ ಹಣ ಕೇಳಿದರೆ ವೈದ್ಯರಿಗೆ ಜೈಲು ಶಿಕ್ಷೆ – ರಾಜ್ಯ ಸರ್ಕಾರದ ಎಚ್ಚರಿಕೆ.

ಅಪ*ತದಲ್ಲಿ ಗಾಯಾಳುಗಳಿಂದ ಮುಂಗಡ ಹಣ ಕೇಳಿದರೆ ವೈದ್ಯರಿಗೆ ಜೈಲು ಶಿಕ್ಷೆ – ರಾಜ್ಯ ಸರ್ಕಾರದ ಎಚ್ಚರಿಕೆ.
ಬೆಂಗಳೂರು: ರಸ್ತೆ ಅಪಘಾತ ಅಥವಾ ತುರ್ತು ಸಂದರ್ಭಗಳಲ್ಲಿ ಗಾಯಾಳುಗಳಿಂದ ಚಿಕಿತ್ಸೆಗೆ ಮುನ್ನ ಹಣ ಕೇಳಿದರೆ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಯ ವೈದ್ಯರಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗುವುದು ಎಂದು ಕರ್ನಾಟಕ ಸರ್ಕಾರ ಘೋಷಿಸಿದೆ.

ಸರ್ಕಾರದ ಆದೇಶ: ಶುಕ್ರವಾರ ರಾಜ್ಯ ಸರ್ಕಾರ ಅಧಿಕೃತವಾಗಿ ಸುತ್ತೋಲೆ ಹೊರಡಿಸಿದೆ. ಗುರುವಾರ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.ತುರ್ತು ಚಿಕಿತ್ಸೆಯಲ್ಲಿ ಯಾವುದೇ ರೀತಿಯ ವಿಳಂಬ ಮಾಡಬಾರದು.

ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆ 2007ರ ಪ್ರಕಾರ:

* ರಸ್ತೆ ಅಪಘಾತ ಪ್ರಕರಣಗಳು

* ಆಕಸ್ಮಿಕ ಅಥವಾ ಪ್ರೇರಿತ ಬೆಂಕಿ ಅವಘಡಗಳು

* ವಿಷಪ್ರಾಶನ

* ಕ್ರಿಮಿನಲ್ ಹಲ್ಲೆ ಪ್ರಕರಣಗಳು

ಶಿಕ್ಷೆ ಹಾಗೂ ದಂಡ

* ಚಿಕಿತ್ಸೆ ನೀಡಲು ವಿಳಂಬ ಮಾಡಿದರೆ ಅಥವಾ ಮುಂಗಡ ಹಣ ಕೇಳಿದರೆ

  * 1 ಲಕ್ಷ ವರೆಗೆ ದಂಡ

  * ಜೈಲು ಶಿಕ್ಷೆ ಕೂಡ ವಿಧಿಸಲಾಗುವುದು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *