ಮೈಸೂರು: ಈ ಬಾರಿಯ ದಸರಾ ಉದ್ಘಾಟನೆಗೆ ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಅವರನ್ನು ಆಯ್ಕೆ ಮಾಡಲಾಗಿದೆ. ಮೈಸೂರಿನ ಚಾಮುಂಡಿಬೆಟ್ಟಕ್ಕೆ ತೆರಳಿ ಮಂಗಳವಾರ ಪೂಜೆ ಸಲ್ಲಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಈ ವಿಷಯವನ್ನು ಪ್ರಕಟಿಸಿದ್ದಾರೆ.
![ನಿರ್ದೇಶಕ](http://pragatitv.in/wp-content/uploads/2022/09/JEENI_ADD_WEB-1024x576.jpg)
ಈ ಬಾರಿಯ ಮೈಸೂರು ದಸರಾವನ್ನು ಸಂಗೀತ ನಿರ್ದೇಶಕರಾಗಿರುವ ಹಂಸಲೇಖ ಅವರಿಂದ ಉದ್ಘಾಟನೆ ಮಾಡಿಸುವ ಕುರಿತು ತೀರ್ಮಾನಿಸಲಾಗಿದೆ ಎಂದು ಸಿದ್ದರಾಮಯ್ಯ ಖಚಿತಪಡಿಸಿದರು. ಅಕ್ಟೋಬರ್ 15 ರಂದು ಹಂಸಲೇಖ ಅವರು ಈ ಬಾರಿಯ ದಸರಾವನ್ನು ಉದ್ಘಾಟಿಸಲಿದ್ದಾರೆ.
ಹಿಂದೆಯೂ ಗಿರೀಶ್ ಕಾರಂತ್, ಬರಗೂರು ರಾಮಚಂದ್ರಪ್ಪ ಅವರು ಸೇರಿದಂತೆ ಹಲವರು ಚಿಂತಕರು ದಸರಾ ಉದ್ಘಾಟಿಸಿದ ಉದಾಹರಣೆಯಿದೆ. ಸಾಹಿತಿಗಳು, ಧರ್ಮಗುರುಗಳೂ ಕೂಡ ದಸರಾವನ್ನು ಹಲವು ಬಾರಿ ಉದ್ಘಾಟಿಸಿದ್ದಾರೆ. ಈ ಬಾರಿ ಹಂಸಲೇಖ ಅವರಿಗೆ ಈ ಬಾರಿ ಅವಕಾಶ ದೊರೆತಿದೆ.
Facebook: https://www.facebook.com/PragathiTV/
Pragati TV Social Connect for more latest u