ಬೆಂಗಳೂರು : ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (KSCPR) ನಿರ್ದೇಶನದ ಮೇರೆಗೆ, ಶಿಕ್ಷಣ ಇಲಾಖೆಯು ಎಲ್ಲಾ ಶಾಲೆಗಳಿಗೆ ಅರ್ಜಿಗಳನ್ನು ಸ್ವೀಕರಿಸಿದ 15 ದಿನಗಳಲ್ಲಿ ವರ್ಗಾವಣೆ ಪ್ರಮಾಣ ಪತ್ರಗಳನ್ನು(TC) ನೀಡುವಂತೆ ಸೂಚಿಸಿದೆ. ಒಂದು ವೇಳೆ ವಿಫಲವಾದರೆ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ಎಚ್ಚರಿಸಿದೆ.
ಟಿಸಿ ಸಿಗದಿದ್ದರೆ ಬಿಇಓಗೆ ವಿನಂತಿ ಸಲ್ಲಿಸಿ
ಶಿಕ್ಷಣ ಇಲಾಖೆ ಕಳಿಸಿರುವ ನೋಟಿಸ್ನಲ್ಲಿ ‘ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಚಟುವಟಿಕೆಗಳಿಂದ ವಂಚಿತರಾಗದಂತೆ ನೋಡಿಕೊಳ್ಳುವ ಸಲುವಾಗಿ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ-2009 ರ ಸೆಕ್ಷನ್ 5(1) ಅನ್ನು ಉಲ್ಲಂಘಿಸದೆ, 15 ದಿನಗಳಲ್ಲಿ ವರ್ಗಾವಣೆ ಪ್ರಮಾಣಪತ್ರವನ್ನು ನೀಡುವುದು ಶಾಲಾ ಪ್ರಾಂಶುಪಾಲರ ಪ್ರಾಥಮಿಕ ಕರ್ತವ್ಯವಾಗಿದೆ. ಶಾಲಾ ಪ್ರಾಂಶುಪಾಲರು ಸಮಯಕ್ಕೆ ಸರಿಯಾಗಿ ವರ್ಗಾವಣೆ ಪತ್ರವನ್ನು ನೀಡದಿದ್ದರೆ, ಪೋಷಕರು ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗೆ ವಿನಂತಿಯನ್ನು ಸಲ್ಲಿಸಬೇಕು. ಮನವಿಯನ್ನು ಸ್ವೀಕರಿಸುವ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸದರಿ ಶಾಲಾ ಪ್ರಾಂಶುಪಾಲರಿಗೆ ಒಂದು ವಾರದ ಕಾಲಾವಕಾಶ ನೀಡಿ, ಮನವಿಯನ್ನು ಪರಿಹರಿಸಲು ಕ್ರಮ ಕೈಗೊಳ್ಳಬೇಕು.’ ಎಂದು ತಿಳಿಸಲಾಗಿದೆ.
ಸರ್ಕಾರಿ ಶಾಲೆಗೆ ವರ್ಗಾವಣೆಯಾದಾಗ ಮಾತ್ರ ಆದೇಶ ಅನ್ವಯ
ಈ ಕುರಿತು ಮಾತನಾಡಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್, ಶಾಲೆಗಳು ಟಿಸಿ ವಿಳಂಬ ಮಾಡುತ್ತಿರುವ ಬಗ್ಗೆ ಪೋಷಕರಿಂದ ಅನೇಕ ದೂರುಗಳು ಬಂದಿರುವುದರಿಂದ ಇಲಾಖೆ ಈ ಸುತ್ತೋಲೆ ಹೊರಡಿಸಿದೆ. ಬಾಕಿ ಇರುವ ಶುಲ್ಕದ ಸಮಸ್ಯೆ ಇದ್ದರೆ, ಬಿಇಒ ಶಾಲೆಗಳಿಗೆ ಸಮಸ್ಯೆಯನ್ನು ಪರಿಹರಿಸಲು ಸಹಾಯ ಮಾಡುತ್ತಾರೆ. ಇಲ್ಲಿಯವರೆಗೆ, ಶಾಲೆಗಳಿಂದ ನಮಗೆ ಅಂತಹ ಯಾವುದೇ ದೂರುಗಳು ಬಂದಿಲ್ಲ ಎಂದು ಹೇಳಿದ್ದಾರೆ.
For More Updates Join our WhatsApp Group :
