ಬೆಳೆಹಾನಿ ಪರಿಹಾರವಿಲ್ಲದೆ ರೈತ ವಿಷ ಸೇವಿಸಿ ಆತ್ಮ*ತ್ಯೆ ಯತ್ನ.!

ಬೆಳೆಹಾನಿ ಪರಿಹಾರವಿಲ್ಲದೆ ರೈತ ವಿಷ ಸೇವಿಸಿ ಆತ್ಮ*ತ್ಯೆ ಯತ್ನ.!

ಗದಗ: ಬೆಳೆಹಾನಿ ಪರಿಹಾರ ಬಾರದಕ್ಕೆ ಮನನೊಂದು ರೈತ ನಾಡಕಚೇರಿಯಲ್ಲಿ ಅಧಿಕಾರಿಗಳ ಎದುರಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ನಡೆದಿದೆ. ನರಗುಂದ ತಾಲೂಕಿನ ಬೆಳ್ಳೇರಿ ಗ್ರಾಮದ ರೈತ ಸಿದ್ದನಗೌಡ ಹಿರೇಗೌಡ್ರು ಆತ್ಮಹತ್ಯೆಗೆ ಯತ್ನಿಸಿದ್ದು, ಸಂಕಟ ತಾಳಲಾರದೆ ನಾಡ ಕಚೇರಿಯಲ್ಲೇ ನರಳಾಡಿದ್ದಾರೆ.

ನಾಲ್ಕು ಎಕರೆ ಜಮೀನಿನಲ್ಲಿ ಗೋವಿನ ಜೋಳ, ಈರುಳ್ಳಿ ಬೆಳೆಯನ್ನ ಸಿದ್ದನಗೌಡ ಹಿರೇಗೌಡ್ರು ಬೆಳೆದಿದ್ದರು. ಆದರೆ, ಮಳೆ ಮತ್ತು ಮಲಪ್ರಭಾ ನದಿ ಪ್ರವಾಹದಿಂದ ಬೆಳೆಗೆ ಹಾನಿಯಾಗಿದೆ. ಹೀಗಿದ್ದರೂ ಈ ಬಗ್ಗೆ ಬೆಳೆ ಹಾನಿ ಎಂಟ್ರಿಯಾಗಿಲ್ಲ. ವಿಷಯವನ್ನು ತಹಶೀಲ್ದಾರ್​ ಮತ್ತು ಜಿಲ್ಲಾಧಿಕಾರಿಗಳ ಗಮನಕ್ಕೆ ತರದೆ ಗ್ರಾಮ ಲೆಕ್ಕಾಧಿಕಾರಿ ನಿರ್ಲಕ್ಷ್ಯತೋರಿದ್ದಾರೆ ಎಂಬುದು ಆರೋಪ ರೈತನದ್ದು. ಹೀಗಾಗಿ ಮನನೊಂದಿದ್ದ ಸಿದ್ದನಗೌಡ ಹಿರೇಗೌಡ್ರು ನಾಡಕಚೇರಿ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ವಿಷ ಸೇವಿಸಿದ್ದ ಸಿದ್ದನಗೌಡ ಹಿರೇಗೌಡ್ರನ್ನು ಸ್ಥಳದಲ್ಲಿದ್ದ ರೈತರು ತಕ್ಷಣ ನರಗುಂದ ಆಸ್ಪತ್ರೆಗೆ ಆ್ಯಂಬುಲೆನ್ಸ್ ಮೂಲಕ ಕೊಂಡೊಯ್ದು ದಾಖಲಿಸಿದ್ದಾರೆ. ಆದರೆ ಪರಿಸ್ಥಿತಿ ಗಂಭೀರವಾಗಿರುವ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ನರಗುಂದ ಡಿವೈಎಸ್ಪಿ ಪ್ರಭು ಸೇರಿ ಅಧಿಕಾರಿಗಳು ಘಟನೆ ಬಗ್ಗೆ ಮಾಹಿತಿ ಪಡೆದಿದ್ದು, ಸಿದ್ದನಗೌಡ ಹಿರೇಗೌಡರಿಗೆ ಏನಾದರೂ ಹೆಚ್ಚುಕಮ್ಮಿ ಆದರೆ ಅಧಿಕಾರಿಗಳೇ ಹೊಣೆ ಎಂದು ಈ ವೇಳೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ

ನೇಣು ಬಿಗಿದುಕೊಂಡು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದ ಕೋಟೆ ರಸ್ತೆಯಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ನಡೆದಿದೆ. ವನೀಷಾ (21) ಮೃತ ಯುವತಿಯಾಗಿದ್ದು, ಮೃತಳು ಭದ್ರಾವತಿ ತಾಲೂಕಿನ ದೊಡ್ಡೇರಿ ಗಂಗೂರು ಗ್ರಾಮದ ನಿವಾಸಿ ಎಂಬುದು ತಿಳಿದುಬಂದಿದೆ. ಶಿವಮೊಗ್ಗದ ಡಿವಿಎಸ್ ಸೈನ್ಸ್ ಕಾಲೇಜ್ ವಿದ್ಯಾರ್ಥಿನಿಯಾಗಿದ್ದ ವನೀಷಾಳ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಲ್ಲ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *