ಚುನಾವಣಾ ಆಯೋಗದಲ್ಲಿ ದೂರು ನೀಡಿ: ಅರ್ಜಿದಾರರಿಗೆ ಸುಪ್ರೀಂ ಕೋರ್ಟ್ ಸೂಚನೆ.

ಚುನಾವಣಾ ಆಯೋಗದಲ್ಲಿ ದೂರು ನೀಡಿ: ಅರ್ಜಿದಾರರಿಗೆ ಸುಪ್ರೀಂ ಕೋರ್ಟ್ ಸೂಚನೆ.

ನವದೆಹಲಿ: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಲ್ಲಿ ದೊಡ್ಡ ಮಟ್ಟದ ಅಕ್ರಮ ನಡೆದಿದೆ ಎನ್ನುವ ಆರೋಪದ ಮೇಲೆ ಎಸ್​ಐಟಿಯಿಂದ ತನಿಖೆ ನಡೆಸಬೇಕು ಎಂದು ಮಾಡಲಾಗಿದ್ದ ಮನವಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ರಾಹುಲ್ ಗಾಂಧಿ ಸೇರಿದಂತೆ ವಿಪಕ್ಷಗಳು ಮತದಾರರ ಪಟ್ಟಿಯಲ್ಲಿ ಅಕ್ರಮವಾಗಿದೆ ಎಂದು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಮನವಿಯನ್ನು ಆಲಿಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜಯಮಾಲ್ಯ ಬಾಗಚಿ ಅವರಿದ್ದ ಸರ್ವೋಚ್ಚ ನ್ಯಾಯಪೀಠ, ಎಸ್​ಐಟಿಗೆ ತನಿಖೆ ವಹಿಸಲು ನಿರಾಕರಿಸಿತು. ಈ ವಿಷಯವನ್ನು ಭಾರತೀಯ ಚುನಾವಣಾ ಆಯೋಗದಲ್ಲಿ ಬಗೆಹರಿಸಿಕೊಳ್ಳಬೇಕೆಂದು ಅರ್ಜಿದಾರರಿಗೆ ಕೋರ್ಟ್ ಸೂಚಿಸಿತು.

2024ರ ಲೋಕಸಭಾ ಚುನಾವಣೆ ವೇಳೆ ಬೆಂಗಳೂರು ಕೇಂದ್ರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ದೊಡ್ಡ ಮಟ್ಟದ ಅಕ್ರಮ ನಡೆದಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. ಈ ಸಂಬಂಧ ವಿಶೇಷ ತನಿಖೆ ನಡೆಸಬೇಕು ಎಂದು ಸುಪ್ರೀಂಕೋರ್ಟ್ ಮುಂದೆ ಅರ್ಜಿ ಸಲ್ಲಿಕೆಯಾಗಿತ್ತು. ಆದರೆ, ಎಸ್​ಐಟಿ ತನಿಖೆಗೆ ಕೋರ್ಟ್ ನಕಾರ ವ್ಯಕ್ತಪಡಿಸಿದ್ದು, ಅರ್ಜಿದಾರರು ಚುನಾವಣಾ ಆಯೋಗಕ್ಕೆ ದೂರು ನೀಡಬೇಕೆಂದು ಸೂಚಿಸಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *