ಗದಗ || ಬೀದಿನಾಯಿಗಳ ಸರಣಿ ಸಾವು : ಆತಂಕದಲ್ಲಿ ಗ್ರಾಮಸ್ಥರು

ಗದಗ || ಬೀದಿನಾಯಿಗಳ ಸರಣಿ ಸಾವು : ಆತಂಕದಲ್ಲಿ ಗ್ರಾಮಸ್ಥರು

ಗದಗ: ಬೀದಿ ನಾಯಿಗಳ ಸರಣಿ ಸಾವು ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಟ್ಟೂರು, ಕುಂಡ್ರಹಳ್ಳಿ, ಕುಂಡ್ರಹಳ್ಳಿ ತಾಂಡಾ, ಶೆಟ್ಟಿ ಕೆರೆ ಗ್ರಾಮಗಳ ನಿವಾಸಿಗಳಲ್ಲಿ ಆತಂಕ ಹುಟ್ಟಿಸಿದೆ.

ಈ ಗ್ರಾಮಗಳಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಾಗಿದ್ದು, ಕಳೆದ ಕೆಲ ದಿನಗಳಿಂದ ಮಕ್ಕಳು, ಹಸು, ಕುರಿ, ಮೇಕೆಗಳ ಮೇಲೆ ದಾಳಿ ಮಾಡಿದೆ. ಅಲ್ಲದೆ, ಗ್ರಾಮದಲ್ಲಿ ಹಲವು ನಾಯಿಗಳು ಇದ್ದಕ್ಕಿದ್ದಂತೆ ಸಾವನ್ನಪ್ಪುತ್ತಿರುವುದು ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ.

ಈ ನಡುವೆ ನಾಯಿಗಳು ಹಸುಗಳನ್ನು ಕಚ್ಚಿರಬಹುದು ಎಂಬ ಭಯದಿಂದ ಗ್ರಾಮಸ್ಥರು ಹಾಲು ಕುಡಿಯಲು, ಖರೀದಿಗೆ ಹಿಂದೇಟು ಹಾಕುತ್ತಿದ್ದಾರೆಂದು ತಿಳಿದುಬಂದಿದೆ.

ಆರೋಗ್ಯ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಲಸಿಕೆ ಅಭಿಯಾನವನ್ನು ಪ್ರಾರಂಭಿಸಿದ್ದು, ಜನರಲ್ಲಿ ರೇಬಿಸ್ ಕುರಿತು ಜಾಗೃತಿ ಮೂಡಿಸಲು ಆರೋಗ್ಯ ಶಿಬಿರಗಳನ್ನೂ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *