ಮೈಸೂರಿಗೆ ಅದ್ಧೂರಿಯಾಗಿ ಎಂಟ್ರಿ ಕೊಟ್ಟ ಗಜಪಡೆ..!!

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆ ಅರಣ್ಯಾಧಿಕಾರಿಗಳು ಮಂಗಳವಾರ ಗಜಪಡೆಗೆ ಪೂಜೆ ನೆರವೇರಿಸಿದರು. ಇಲ್ಲಿನ ಅರಣ್ಯ ಭವನದಲ್ಲಿ ವಿಶೇಷ ಪೂಜೆ ಸಲ್ಲಿಕೆ ಮಾಡಲಾಯಿತು. ಗಜಪೂಜೆ ನಂತರ ನೈವೇದ್ಯ ಅರ್ಪಣೆ ಮಾಡಲಾಯಿತು. ಅರಣ್ಯಾಧಿಕಾರಿಗಳು ಗಜಪಡೆಗೆ ಪುಷ್ಪಾರ್ಚನೆ ಮಾಡಿದರು.

ಅದ್ಧೂರಿ

ವಾದ್ಯಗೋಷ್ಠಿ ಮೂಲಕ ಅರಮನೆಯತ್ತ ಗಜಪಡೆ ಕಾಲ್ನಡಿಗೆಯಲ್ಲಿ ತೆರಳಿತು. ಕ್ಯಾಪ್ಟನ್ ಅಭಿಮನ್ಯು ಹಾಗೂ ಗಜಪಡೆಯು ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಆಗಮಿಸಿದ ವೇಳೆಯಲ್ಲಿ ಅದ್ಧೂರಿ ಸ್ವಾಗತ ಕೋರಲಾಯಿತು. ಜನಪದ ಕಲಾ ತಂಡಗಳೊಂದಿಗೆ ನಗರದ ಅಶೋಕಪುರಂನ ಅರಣ್ಯ ಭವನದಿಂದ ಅರಮನೆಗೆ ಆಗಮಿಸಿದವು.

ಕಾಲ್ನಡಿಗೆ ಮೆರವಣಿಗೆಯಲ್ಲಿ ಸಾಗುತ್ತಿದ್ದ ವೇಳೆ ಅಲಂಕಾರಗೊಂಡ ಗಜಪಡೆಯನ್ನು ಜನ ಕಣ್ತುಂಬಿಕೊಂಡರು. ಕಳೆದ ಸೆಪ್ಟೆಂಬರ್ 1ರಂದು ಈ ಗಜಪಡೆ ಹುಣಸೂರಿನ ವೀರನಹೊಸಹಳ್ಳಿಯಿಂದ ಮೈಸೂರಿಗೆ ಆಗಮಿಸಿದ್ದವು. ಅರಣ್ಯ ಭವನದಲ್ಲಿ ಆನೆಗಳು ವಾಸ್ತವ್ಯ ಹೂಡಿದ್ದವು. ಇಂದು (ಮಂಗಳವಾರ) ಅರಣ್ಯ ಭವನದಿಂದ ಮೈಸೂರು ಅರಮನೆಗೆ ಬಂದವು. ಮಧ್ಯಾಹ್ನ 12.01 ರಿಂದ 12.51 ಸಮಯದ ಅಭಿಜನ್ ಲಗ್ನದಲ್ಲಿ ಸಾಂಪ್ರದಾಯಿಕ ಪೂಜೆ ಸಲ್ಲಿಸಿದ ಜಿಲ್ಲಾಡಳಿತ ಹಾಗೂ ಅರಮನೆ ಆಡಳಿತ ಮಂಡಳಿಯು ಗಜಪಡೆಗೆ ಅದ್ಧೂರಿಯಾಗಿ ಸ್ವಾಗತಿಸಿದರು.

Facebook: https://www.facebook.com/PragathiTV/

Pragati TV Social Connect for more latest u

Leave a Reply

Your email address will not be published. Required fields are marked *