ಕಲ್ಪತರು ನಾಡಿನ ಈ 29 ಗ್ರಾಮಗಳಿಗೆ ಗುಡ್ ನ್ಯೂಸ್ ಡಿಸಿ ಕೊಟ್ರು ಕುತೂಹಲದ ಮಾಹಿತಿ

ಕಲ್ಪತರು ನಾಡಿನ ಈ 29 ಗ್ರಾಮಗಳಿಗೆ ಗುಡ್ ನ್ಯೂಸ್ ಡಿಸಿ ಕೊಟ್ರು ಕುತೂಹಲದ ಮಾಹಿತಿ

ತುಮಕೂರು: ಪ್ರಧಾನ ಮಂತ್ರಿ ಜನಜಾತಿಯ ಉನ್ನತ ಗ್ರಾಮ ಅಭಿಯಾನ ಯೋಜನೆಯಡಿ ಅಭಿವೃದ್ಧಿಪಡಿಸಲು ಪರಿಶಿಷ್ಟ ಪಂಗಡದ ಜನಾಂಗದವರು ಹೆಚ್ಚಾಗಿರುವ   ಜಿಲ್ಲೆಯ ತುಮಕೂರು, ಕೊರಟಗೆರೆ, ಸಿರಾ, ಪಾವಗಡ, ಮಧುಗಿರಿ, ಗುಬ್ಬಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ವ್ಯಾಪ್ತಿಯ 29 ಗ್ರಾಮಗಳನ್ನು ಆಯ್ಕೆ ಮಾಡಿದ್ದು,  ಮೂಲಭೂತ ಸೌರ್ಯಗಳ ಅಭಿವೃದ್ದಿಗೆ ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮೀಸಲಿರಿಸಿದ 29156 ಕೋಟಿ ರೂ.ಗಳ ಅನುದಾನದಲ್ಲಿ ಬುಡಕಟ್ಟು ಸಮುದಾಯಗಳು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ದೇಶದ 63000 ಗ್ರಾಮಗಳನ್ನು ಅಭಿವೃದ್ದಿ ಪಡಿಸಲು ಈ ಕ್ರಿಯಾಯೋಜನೆಯನ್ನು ರೂಪಿಸಲಾಗಿದೆ.

ಕೇಂದ್ರ ಬುಡಕಟ್ಟು ಮಂತ್ರಾಲಯ ಈ ಯೋಜನೆಯನ್ನು ಅನುಷ್ಟಾನಗೊಳಿಸುವ ಜವಾಬ್ದಾರಿ ಹೊತ್ತಿದೆ. ದೇಶದ ಸುಮಾರು 5 ಕೋಟಿ ಜನರಿಗೆ ಯೋಜನೆಯಿಂದ ಅನುಕೂಲವಾಗಲಿದೆ.

ಐದು ವರ್ಷಗಳ ಅವಧಿಗೆ ಅಭಿವೃದ್ಧಿ:- 2024-25ರಿಂದ 2028-29ನೇ ಸಾಲಿನವರೆಗೆ 5 ವರ್ಷಗಳಲ್ಲಿ ಯೋಜನೆಯನ್ನು ಪೂರ್ಣಗೊಳಿಸಲಾಗುವುದು.  2024-25 ರಿಂದ 2025-26ನೇ ಸಾಲಿಗೆ ಮೊದಲ ಹಂತದಲ್ಲಿ  4000 ಕೋಟಿ ರೂ.ಗಳ ಅನುದಾನವನ್ನು ಪ್ರಧಾನ ಮಂತ್ರಿ ಜನಜಾತಿಯ ಉನ್ನತ ಗ್ರಾಮ ಅಭಿಯಾನದಡಿ ನಿಗಧಿ ಮಾಡಲಾಗಿದೆ.

 ಈ ಅಭಿಯಾನದಡಿ ತುಮಕೂರು ಜಿಲ್ಲೆಯಲ್ಲಿ ಪರಿಶಿಷ್ಟ ವರ್ಗದ ಜನಾಂಗದವರು ಹೆಚ್ಚಾಗಿರುವ 29 ಗ್ರಾಮಗಳನ್ನು ಆಯ್ಕೆ ಮಾಡಿ ಭೌತಿಕ ಗುರಿ ನಿಗಧಿ ಪಡಿಸಲಾಗಿದ್ದು, ವಿವಿಧ 17 ಇಲಾಖೆಗಳು ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಿವೆ.

ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಪಕ್ಕಾ ಮನೆ, ಸಂಪರ್ಕ ರಸ್ತೆಗಳು, ಗ್ರಾಮೀಣ ನೀರು ಸರಬರಾಜು ಇಲಾಖೆಯಿಂದ ನೀರು ಸರಬರಾಜು(ಜೆಜೆಎಂ), ವಿದ್ಯುತ್ ಇಲಾಖೆಯಿಂದ ಮನೆಗಳ ವಿದ್ಯುದೀಕರಣ (ಆರ್‌ಡಿಎಸ್‌ಎಸ್), ಹೊಸ ಮತ್ತು ನವೀಕರಿಸಬಹುದಾದ ಇಂಧನ ಇಲಾಖೆಯಿಂದ ಆಫ್-ಗ್ರಿಡ್ ಸೌರ, ಹೊಸ ಸೌರ ವಿದ್ಯುತ್ ಯೋಜನೆ, ಆರೋಗ್ಯ ಇಲಾಖೆಯಿಂದ ಸಂಚಾರಿ ವೈದ್ಯಕೀಯ ಘಟಕಗಳು, ರಾಷ್ಟ್ರೀಯ ಆರೋಗ್ಯ ಮಿಷನ್, ಆಯುಷ್ಮಾನ್ ಕಾರ್ಡ್, ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ  ಇಲಾಖೆಯಿಂದ ಎಲ್‌ಪಿಜಿ ಪಿಎಂ ಉಜ್ಜಲ ಯೋಜನೆಯಡಿ ಸಂಪರ್ಕಗಳು, ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆಯಿಂದ ಅಂಗನವಾಡಿ ಕೇಂದ್ರಗಳ ಅಭಿವೃದ್ಧಿ ಪೋಷಣ್ ಅಭಿಯಾನ್, ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿನಿಲಯಗಳ ನಿರ್ಮಾಣ, ಆಯುಷ್ ಇಲಾಖೆಯಿಂದ ಪೋಷಣ್ ವಾಟಿಕಾಸ್, ಟೆಲಿಕಾಂ ಇಲಾಖೆಯಿಂದ ಯುನಿವರ್ಸಲ್ ಸೇವೆ, ಕೌಶಾಲ್ಯಾಭಿವೃದ್ಧಿ ಇಲಾಖೆಯಿಂದ ಸ್ಕಿಲ್ ಇಂಡಿಯಾ, ಮಾಹಿತಿ ತಂತ್ರಜ್ಞಾನ ಮತ್ತು ಎಲೆಕ್ಟ್ರಾನಿಕ್ ಇಲಾಖೆಯಿಂದ ಡಿಜಿಟಲ್ ಇನಿಶೀಯೇಟಿವ್ಸ್, ಕೃಷಿ ಇಲಾಖೆಯಿಂದ ಸುಸ್ಥಿರ ಕೃಷಿ ಉತ್ತೇಜನ, ಮೀನುಗಾರಿಕೆ ಇಲಾಖೆಯಿಂದ ಮೀನು ಸಂಸ್ಕೃತಿ ಬೆಂಬಲ, ಪಶುಸಂಗೋಪನೆ ಇಲಾಖೆಯಿಂದ ಜಾನುವಾರು ಪಾಲನೆ, ಪಂಚಾಯತ್ ರಾಜ್ ಇಲಾಖೆಯಿಂದ ಸಾಮರ್ಥ್ಯ ಕಟ್ಟಡ, ಪ್ರವಾಸೋದ್ಯಮ ಇಲಾಖೆಯಿಂದ ಟ್ರೆöÊಬಲ್ ಹೋಂ ಸ್ಟೇಸ್, ಸ್ವದೇಶ ದರ್ಶನ ಬುಡಕಟ್ಟು ವ್ಯವಹಾರಗಳ ಸಚಿವಾಲಯದಿಂದ ಫ್ರಧಾನಮಂತ್ರಿ ಆದಿ ಆದರ್ಶ ಗ್ರಾಮ ಯೋಜನೆ ಅನುಷ್ಟಾನಗೊಳ್ಳಲಿವೆ.

ಅಭಿಯಾನದಡಿ ಜಿಲ್ಲೆಯಲ್ಲಿ 100 ಬುಡಕಟ್ಟು ಬಹು ಉಪಯೋಗಿ ಮಾರ್ಕೆಟಿಂಗ್ ಕೇಂದ್ರಗಳು, ಆಶ್ರಮ ಶಾಲೆಗಳು, ವಿದ್ಯಾರ್ಥಿನಿಲಯಗಳು, ಸರ್ಕಾರಿ ಅಥವಾ ರಾಜ್ಯ ಬುಡಕಟ್ಟು ವಸತಿ ಶಾಲೆಗಳ ಮೂಲಭೂತ ಸೌಕರ್ಯಗಳನ್ನು ಸುಧಾರಿಸುವುದು, ಕೌನ್ಸಿಲಿಂಗ್ ಬೆಂಬಲ, ಅರಣ್ಯ ಹಕ್ಕು ಕಾಯ್ದೆ-2006 ಮತ್ತು ಸಮುದಾಯ ಅರಣ್ಯ ಹಕ್ಕು ನಿರ್ವಹಣೆ ಮಧ್ಯಸ್ಥಿಕೆಗಳಿಗೆ ಬೆಂಬಲ, ಯೋಜನಾ ನಿರ್ವಹಣಾ ನಿಧಿಗಳು, ಉತ್ಪನ್ನ ಪ್ರದರ್ಶನ ನಿಡುವ ಬುಡಕಟ್ಟು ಜಿಲ್ಲೆಗಳಿಗೆ ಪ್ರೋತ್ಸಾಹ ನೀಡಲು ಅವಕಾಶ ಕಲ್ಪಿಸಲಾಗುವುದು.

ಈ ಯೋಜನೆಗೆ ತುಮಕೂರು ಜಿಲ್ಲೆಯ, ತುಮಕೂರು, ಕೊರಟಗೆರೆ, ಸಿರಾ, ಪಾವಗಡ, ಮಧುಗಿರಿ, ಗುಬ್ಬಿ, ಚಿಕ್ಕನಾಯಕನಹಳ್ಳಿ ತಾಲ್ಲೂಕುಗಳ ವ್ಯಾಪ್ತಿಗೆ ಒಳಪಟ್ಟ 29 ಗ್ರಾಮಗಳ ಎಲ್ಲಾ ಬುಡಕಟ್ಟು ಜನಾಂಗದವರು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *