ಶಿಕ್ಷಣ ಇಲಾಖೆ ಹಾಗೂ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ನಡೆಸಿದ ಸರ್ಕಾರ!!!

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ಎರಡು ತಿಂಗಳ ಬಳಿಕ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಕೆಲಸ ನಡೆದಿದೆ. ಶಿಕ್ಷಣ ಇಲಾಖೆಯಲ್ಲಿ ಮೇಜರ್ ಸರ್ಜರಿ ನಡೆದಿದ್ದು, ಡಿಡಿಪಿಐಗಳ ವರ್ಗಾವಣೆ ಆದೇಶವನ್ನು ಸರ್ಕಾರ ಪ್ರಕಟಿಸಿದೆ.

ಇಲಾಖೆ

ಪೊಲೀಸ್ ಇಲಾಖೆಯಲ್ಲೂ ಭಾರಿ ಸರ್ಜರಿ ನಡೆಸಿದ್ದ ಸರ್ಕಾರ ಒಂದೇ ದಿನ 200ಕ್ಕೂ ಹೆಚ್ಚು ಇನ್ಸ್ಪೆಕ್ಟರ್ಗಳ ವರ್ಗಾವಣೆ ಆದೇಶ ಪ್ರಕಟಿಸಿದೆ. ರಾಜ್ಯದ ಮೂವತ್ತು ಜಿಲ್ಲೆಗಳ ಡಿಡಿಪಿಐಗಳನ್ನು ವರ್ಗಾವಣೆ ಮಾಡಲಾಗಿದೆ. ವರ್ಗಾವಣೆ ಆದೇಶದಲ್ಲಿ ಎಲ್ಲಿಂದ ಎಲ್ಲಿಗೆ ಎಂಬ ವಿವರವೂ ಇದೆ. ಕರ್ನಾಟಕ ಸರ್ಕಾರ ಒಂದೇ ದಿನ 211 ಪೊಲೀಸ್ ಇನ್ಸ್ಪೆಕ್ಟರ್ಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಸರ್ಕಾರದ ಈ ಆದೇಶ ನಿನ್ನೆ ಪ್ರಕಟವಾಗಿದ್ದು, ಪೊಲೀಸ್ ಇನ್ ಸ್ಪೆಕ್ಟರ್ (ಸಿವಿಲ್) ವರ್ಗಾವಣೆ ಆದೇಶವು ತಕ್ಷಣದಿಂದ ಜಾರಿಗೆ ಬಂದಿದೆ. ವರ್ಗಾವಣೆ ಆದೇಶದಲ್ಲಿ ಅವರು ಕೆಲಸ ಮಾಡುತ್ತಿರುವ ಹಾಲಿ ಸ್ಥಳ ಮತ್ತು ವರ್ಗಾವಣೆ ಎಲ್ಲಿಗೆ ಎಂಬುದರ ವಿವರ ನಮೂದಿಸಲಾಗಿದೆ. ಬಹುತೇಕ ಜಿಲ್ಲೆ, ಸಿಸಿಬಿ , ಗುಪ್ತ ವಾರ್ತೆಯ ಪೊಲೀಸ್ ಇನ್ ಸ್ಪೆಕ್ಟರ್ಗಳ ವರ್ಗಾವಣೆ ಆಗಿದೆ.

Facebook: https://www.facebook.com/PragathiTV/

Pragati TV Social Connect for more latest u

Leave a Reply

Your email address will not be published. Required fields are marked *